ಸಲ್ಮಾನ್ ಖಾನ್‌ ನಿವಾಸದ ಮುಂದೆ ತಮಿಳುಪರ ಸಂಘಟನೆಗಳು ಪ್ರತಿಭಟನೆ 
ದೇಶ

ಸಲ್ಮಾನ್‌ಖಾನ್ ನಿವಾಸದ ಮುಂದೆ ತಮಿಳಗರ ಬೃಹತ್ ಪ್ರತಿಭಟನೆ

ಶ್ರೀಲಂಕಾದಲ್ಲಿ ಅಧ್ಯಕ್ಷ ಚುನಾವಣೆಗೆ ದಿನಗಣಗೆ ಆರಂಭವಾಗಿದ್ದು...

ಮುಂಬೈ: ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಪರ ಮತ ಪ್ರಚಾರ ಮಾಡಿರುವುದನ್ನು ಖಂಡಿಸಿ, ಬಾಲಿವುಡ್‌ನಟ ಸಲ್ಮಾನ್ ಖಾನ್‌ನ ಮುಂಬೈ ನಿವಾಸದ ಮುಂದೆ ಇಂದು ಬೆಳಿಗ್ಗೆ ತಮಿಳುಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದವು.

ಸಲ್ಮಾನ್‌ಖಾನ್ ಕೂಡಲೇ ಈ ಸಂಬಂಧ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿ, ಸಲ್ಮಾನ್‌ಖಾನ್ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾ ನಿರತರನ್ನು ಪೈಕಿ ಸುಮಾರು 16 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀಲಂಕಾದಲ್ಲಿ ಅಧ್ಯಕ್ಷ ಚುನಾವಣೆಗೆ ದಿನಗಣಗೆ ಆರಂಭವಾಗಿದ್ದು, ಮತದಾರರನ್ನು ಸೆಳೆಯಲು ಶ್ರೀಲಂಕಾ ಅಭ್ಯರ್ಥಿಗಳು ವಿಭಿನ್ನ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಸ್ತುತ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ, ಪುನಃ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಚುನಾವಣಾ ಪ್ರಚಾರಕ್ಕಾಗಿ ಹಾಲಿವುಡ್ ನಟ ಸಲ್ಮಾನ್‌ಖಾನ್ ಅವರನ್ನು ಬಳಸಿಕೊಂಡಿರುವುದು ಭಾರತೀಯ ತಮಿಳಗರನ್ನು ಕೆರಳಿಸಿದೆ.

ನಟ ಸಲ್ಮಾನ್ ಖಾನ್, ಶ್ರೀಲಂಕಾ ಮೂಲದ ಜಾಕ್ವಿಲಿನ್ ಫರ್ನಾಂಡೀಸ್ ಸೇರಿದಂತೆ ಐವರು ಬಾಲಿವುಡ್ ನಟರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಇದನ್ನು ಖಂಡಿಸಿ, ಸಲ್ಮಾನ್‌ಖಾನ್ ಅವರ ಮುಂಬೈ ನಿವಾಸದ ಮುಂದೆ ತಮಿಳು ಸಂಘಟನೆಗಳು ಜಮಾಯಿಸಿ, ಪ್ರತಿಭಟನೆ ನಡೆಸಿದವು.

ತಮಿಳರ ವಿರೋಧಿಯಾಗಿರುವ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಪರ ಸಲ್ಮಾನ್‌ಖಾನ್ ಪ್ರಚಾರ ಮಾಡಬಾರದು. ಅಲ್ಲದೆ ಈ ಸಂಬಂಧ ಕೂಡಲೇ ಸಲ್ಮಾನ್‌ಖಾನ್ ಕ್ಷಮೆಯಾಚಿಸಬೇಕು ಎಂದು ಅವರು ಪ್ರತಿಭಟನಿರತರು ಆಗ್ರಹಿಸಿದರು.

ಸಲ್ಮಾನ್‌ಖಾನ್ ವಿರುದ್ಧ ಡಿಎಂಕೆ ಹಾಗೂ ಎಂಡಿಎಂಕೆ ಪಕ್ಷಗಳು ಸಹಾ ತೀವ್ರ ವಿರೋಧ ವ್ಯಕ್ತಪಡಿಸಿವೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಂಡಿಎಂಕೆ ಅಧ್ಯಕ್ಷ ವೈಕೋ, ಭಾರತೀಯ ಮೀನುಗಾರರನ್ನು ಪದೇ ಪದೇ ಬಂಧಿಸುತ್ತಿರುವ ಶ್ರೀಲಂಕಾದ ಯಾವುದೇ ಪಕ್ಷದ ಪರ ಪ್ರಚಾರಕ್ಕೆ ಭಾರತೀಯರು ಬೆಂಬಲಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

SCROLL FOR NEXT