ದೇಶ

ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, 10 ಬಿಎಸ್‌ಎಫ್ ಶಿಬಿರಗಳ ಮೇಲೆ ದಾಳಿ, ಒಬ್ಬ ಬಿ ಎಸ್ ಎಫ್ ಸೈನಿಕ ಸಾವು

ದೇಶದಲ್ಲಿ ಜ.26ರ ಗಣರಾಜ್ಯೋತ್ಸವ ಸಂಭ್ರಮವನ್ನು ...

ಬೆಂಗಳೂರು: ದೇಶದಲ್ಲಿ ಜ.26ರ ಗಣರಾಜ್ಯೋತ್ಸವ ಸಂಭ್ರಮವನ್ನು ಹೇಗಾದರೂ ಮಾಡಿ ಹಾಳುಗೆಡವಲು ಪಣತೊಟ್ಟಿರುವ ಪಾಕ್ ಸೇನೆ ಸೋಮವಾರ  ಮತ್ತೆ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ

ಪಾಕಿಸ್ತಾನ ಇಂದು ಗಡಿ ರಕ್ಷಣಾ ಪಡೆ(ಬಿಎಸ್‌ಎಫ್)ಯ ಔಟ್‌ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು, ಬಿಎಸ್‌ಎಫ್ ನ 10 ಶಿಬಿರಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.

ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ಸಾಂಬಾ ಜಿಲ್ಲೆಯ 10 ಬಿಎಸ್‌ಎಫ್ ಔಟ್‌ಪೋಸ್ಟ್ ಗಳ ಮೇಲೆ ಪಾಕ್ ಸೇನಾ ಪಡೆಗಳು ನಿರಂತರ ಗುಂಡಿನ ದಾಳಿ ನಡೆಸುತ್ತಿವೆ ಎಂದು ಕತುವಾ ಉಪ ಪೋಲಿಸ್ ಆಯುಕ್ತ ಶಾಹಿದ್ ಇಖ್ಬಾಲ್ ಚೌಧರಿ ಅವರು ಹೇಳಿದ್ದಾರೆ.

ಈ ದಾಳಿಯಲ್ಲಿ ಒಬ್ಬ ಬಿ ಎಸ್ ಎಫ್ ಸೈನಿಕ ಮೃತ ಪಟ್ಟಿದ್ದಾನೆ ಎಂದು ಅವರು ತಿಳಿಸಿದ್ದಾರೆ. ಸಾಂಬಾ ಪ್ರದೇಶದಲ್ಲಿ ನಿಯೋಜಿತರಾಗಿದ್ದ ಇವರು ದೇವಿಂದರ್ ಕುಮಾರ್ ಎಂದು ಗುರುತಿಸಲಾಗಿದೆ. ಭಾರತ ಕೂಡ ಪ್ರತಿದಾಳಿಯನ್ನು ಮುಂದುವರೆಸಿದೆ ಎಂದು ತಿಳಿದು ಬಂದಿದೆ.

ಸಾಂಬಾ ಜಿಲ್ಲೆಯಲ್ಲೂ ಭಾರತೀಯ ಸೇನಾ ಶಿಬಿರಗಳ ಮೇಲೆ ಪಾಕ್ ಸೇನಾಪಡೆಗಳು ಎರಡು ಸುತ್ತಿನ ಗುಂಡಿನ ದಾಳಿ ನಡೆಸಿವೆ ಎಂದು ಸಾಂಬಾ ಎಸ್‌ಎಸ್‌ಪಿ ಅನಿಲ್ ಮಗೋತ್ರಾ ಅವರು ತಿಳಿಸಿದ್ದಾರೆ.

ಈ ಮಧ್ಯೆ, ಪದೆಪದೇ ಪಾಕಿಸ್ತಾನದ ಕದನ ವಿರಾಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶದ ಗ್ರಾಮಗಳ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವುದು ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT