ಕಲ್ಲಿದ್ದಲು ನೌಕರರ ಮುಷ್ಕರ ಆರಂಭ 
ದೇಶ

ಬಂಡವಾಳ ಹಿಂದಕ್ಕೆ: ಕಲ್ಲಿದ್ದಲು ನೌಕರರ ಮುಷ್ಕರ ಆರಂಭ

ಕೋಲ್ ಇಂಡಿಯಾದಿಂದ ಬಂಡವಾಳ ಹಿಂಪಡೆಯುವುದು ಮತ್ತು ಪುನಾ ರಚನೆ ವಿರೋಧಿಸಿ ಸಂಸ್ಥೆಯ...

ಕೋಲ್ಕತಾ/ನವದೆಹಲಿ: ಕೋಲ್ ಇಂಡಿಯಾದಿಂದ ಬಂಡವಾಳ ಹಿಂಪಡೆಯುವುದು ಮತ್ತು ಪುನಾ ರಚನೆ ವಿರೋಧಿಸಿ ಸಂಸ್ಥೆಯ 3.5 ಲಕ್ಷ ನೌಕರರು ಮಂಗಳವಾರದಿಂದ 5 ದಿನಗಳ ಕಾಲ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಶೇ.60 ರಷ್ಟು ಕಲ್ಲಿದ್ದಲು ಉತ್ಪಾದನೆ ಈಗಾಗಲೇ ಸ್ಥಗಿತಗೊಂಡಿದೆ. ಮುಷ್ಕರಕ್ಕೆ ಕರೆ ನೀಡಿರುವ ಕಾರ್ಮಿಕ ಸಂಘಟನೆಗಳೊಂದಿಗೆ ಕೇಂದ್ರ ಮಾತುಕತೆ ಆರಂಭಿಸಿದ್ದು, ಅದು ವಿಫಲವಾಗಿದೆ.

1977ರಲ್ಲಿ ನಡೆದ ಅತಿದೊಡ್ಡ ಮುಷ್ಕರದ ಬಳಿಕ ಇದೇ ಮೊದಲ ಬಾರಿಗೆ ಸಂಸ್ಥೆಯ ನೌಕರರು ಬೃಹತ್ ಪ್ರಮಾಣದಲ್ಲಿ ಮುಷ್ಕರಕ್ಕೆ ಮುಂದಾಗಿದ್ದಾರೆ. ನೌಕರರ ನಿರ್ಧಾರದಿಂದಾಗಿ 438ರ ಪೈಕಿ 271 ಘಟಕಗಳಲ್ಲಿ ಕಾರ್ಯ ಸ್ಥಗಿತಗೊಂಡಿವೆ. ಮೊದಲ ದಿನದ ನಷ್ಟ ಸುಮಾರು 35 ಕೋಟಿ ಆಗಬಹುದು ಎಂದು ಅಂದಾಜಿಸಲಾಗಿದೆ.

ಬಿಜೆಪಿ ನೇತೃತ್ವದ ಭಾರತೀಯ ಮಜ್ದೂರ್ ಸಭಾ ಮುಷ್ಕರಕ್ಕೆ ಕರೆ ನೀಡಿದೆ. ಇದರ ಜತೆಗೆ ಇತರ ನಾಲ್ಕು ಪ್ರಮುಖ ಕಾರ್ಮಿಕ ಸಂಘಟನೆಗಳೂ ಬೆಂಬಲ ಸೂಚಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT