ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ವಾಪಸ್ 
ದೇಶ

ಸಂಧಾನ ಯಶಸ್ವಿ ಕಲ್ಲಿದ್ದಲು ಮುಷ್ಕರ ಹಿಂದಕ್ಕೆ

ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ...

ನವದೆಹಲಿ: ಎರಡು ದಿನಗಳ ಕಾಲ ದೇಶಾದ್ಯಂತ ನಡೆದ ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ಹಿಂಪಡೆಯಲಾಗಿದೆ.

ಬುಧವಾರ ತಡರಾತ್ರಿ ದೆಹಲಿಯಲ್ಲಿ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜತೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ, ಅದರಿಂದ ಬಂಡವಾಳ ಹಿಂಪಡೆಯುವುದಿಲ್ಲ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.

1977ರ ಬಳಿಕ ಅತಿದೊಡ್ಡ ಮುಷ್ಕರ ಎಂದು ಬಣ್ಣಿಸಲಾಗಿದ್ದ ನೌಕರರ ಪ್ರತಿಭಟನೆ ಎರಡು ದಿನಗಳ ಹಿಂದೆ ಆರಂಭವಾಗಿತ್ತು. ಒಟ್ಟಾರೆ ಮುಷ್ಕರದಿಂದ ದೇಶದ ಹೆಚ್ಚಿನ ಕಲ್ಲಿದ್ದಲು ಬ್ಲಾಕ್‌ಗಳಲ್ಲಿ ಕೆಲಸ ಸ್ಥಗಿತಗೊಂಡಿತ್ತು. ಮಾತ್ರವಲ್ಲದೆ ರೂ.300 ಕೋಟಿ ನಷ್ಟವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT