ಡಿ.7ರಂದು ಬಂಧಿತನಾದ ಆರೋಪಿ ಉಬರ್ ಕ್ಯಾಬ್ ಚಾಲಕ ಶಿವಕುಮಾರ್ 
ದೇಶ

ಉಬರ್ ಕ್ಯಾಬ್: ಅತ್ಯಾಚಾರ ಮಾಡಿದ್ದು ಇವನೇ ಎಂದ ಯುವತಿ

ತನ್ನನ್ನು ಅತ್ಯಾಚಾರ ಮಾಡಿದ್ದು ಇವನೇ ಎಂದು ಉಬರ್ ಕ್ಯಾಬ್ ಚಾಲಕನಿಂದ...

ನವದೆಹಲಿ: ತನ್ನನ್ನು ಅತ್ಯಾಚಾರ ಮಾಡಿದ್ದು ಇವನೇ ಎಂದು ಉಬರ್ ಕ್ಯಾಬ್ ಚಾಲಕನಿಂದ ಅತ್ಯಾಚಾರಕ್ಕೊಳಗಾದ ಯುವತಿ ಹೇಳಿದ್ದಾಳೆ.

ಚಾರ್ಚ್ ಶೀಟ್ ಹಾಕುವುದಕ್ಕೂ ಮೊದಲು ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳುವ ಸಲುವಾಗಿ ಡಿ.8 ರಂದು ಯುವತಿಯನ್ನು ತೀಸ್ ಹಜಾರಿ ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಕ್ಯಾಬ್ ಚಾಲಕನನ್ನು ಕಂಡ ಯುವತಿ ಆತನನ್ನು ಗುರ್ತಿಸಿ, 'ನನ್ನನ್ನು ಅತ್ಯಾಚಾರ ಮಾಡಿದ ಭೂತ ಇವನೇ' ಎಂದು ಕೆಂಡಮಂಡಲವಾಗಿ ನ್ಯಾಯಾಲಯದ ಹೊರಾಂಗಣದಲ್ಲಿ ಕೂಗಾಡಿದಳು.

ಈ ವೇಳೆ ಸ್ಥಳದಲ್ಲಿದ್ದ ಆರೋಪಿ ಶಿವಕುಮಾರ್ ಯಾದವ್ ನನಗೆ ಉಸಿರುಗಟ್ಟಿದ್ದಂತೆ ಆಗುತ್ತಿದ್ದು, ಮಾತನಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿ ತನಿಖೆಗೆ ಸಹಕರಿಸಲಿಲ್ಲ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಗುರ್‌ಗಾಂವ್‌ನ ಹಣಕಾಸು ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ (27) ಕೆಲಸ ಮುಗಿಸಿ ರಾತ್ರಿ ನವದೆಹಲಿಯ ಇಂದರ್‌ಲೋಕ ಪ್ರದೇಶದಲ್ಲಿರುವ ಮನೆಗೆ ಉಬರ್ ಟ್ಯಾಕ್ಸಿ ಯ ಮೂಲಕ ಹೋಗುತ್ತಿದ್ದಳು. ಕಾರಿನ ಹಿಂದಿನ ಸೀಟಿನಲ್ಲಿದ್ದ ಆಕೆ ನಿದ್ರೆ ಹೋಗಿದ್ದನ್ನು ಕಂಡ ಟ್ಯಾಕ್ಸಿ ಚಾಲಕ ಕಾರನ್ನು ನಿರ್ಜನ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಯುವತಿಗೆ ಥಳಿಸಿ ಅತ್ಯಾಚಾರ ಎಸಗಿ ನಂತರ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಡಿ.7ರಂದು ಅತ್ಯಾಚಾರ ಎಸಗಿದ್ದ ಉಬರ್ ಕ್ಯಾಬ್ ಚಾಲಕ ಶಿವಕುಮಾರ್ (32) ಎಂಬಾತನನ್ನು ಬಂಧಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ 100 ಪುಟಗಳ ಚಾರ್ಚ್‌ಶೀಟ್ ದಾಖಲಿಸಲಾಗಿದ್ದು, 44 ಪ್ರಮುಖ ದಾಖಲೆಗಳನ್ನು ದೆಹಲಿ ಪೊಲೀಸರು ಸಂಗ್ರಹಿಸಿದ್ದಾರೆ. ಆರೋಪಿ ಶಿವಕುಮಾರ್ ಯಾದವ್ ವಿರುದ್ಧ ಸೆಕ್ಷನ್ 376 (ಅತ್ಯಾಚಾರ), 366 (ಅಪಹರಣ), 506 ( ಪ್ರಾಣ ಬೆದರಿಕೆ), 323 (ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT