ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ದೇಶ

ಕೆಲವರ ಹೇಳಿಕೆಯಿಂದ ಬಿಜೆಪಿ ಪ್ರತಿಷ್ಠೆ ಹಾಳಾಗುತ್ತಿದೆ: ಅಮಿತ್ ಶಾ

ಮರುಮತಾಂತರ ಕುರಿತಂತೆ ಪಕ್ಷದ ಕೆಲವು ಸಂಸದರು ನೀಡುತ್ತಿರುವ ಹೇಳಿಕೆಯಿಂದಾಗಿ ಬಿಜೆಪಿ ಪಕ್ಷದ...

ಹೈದರಾಬಾದ್: ಮರುಮತಾಂತರ ಕುರಿತಂತೆ ಪಕ್ಷದ ಕೆಲವು ಸಂಸದರು ನೀಡುತ್ತಿರುವ ಹೇಳಿಕೆಯಿಂದಾಗಿ ಬಿಜೆಪಿ ಪಕ್ಷದ ಪ್ರತಿಷ್ಠೆ ಹಾಳಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಈ ಕುರಿತಂತೆ ಇಂದು ಹೈದರಾಬಾದ್ ನಲ್ಲಿ ಮಾತನಾಡಿರುವ ಅಮಿತ್ ಶಾ, ಪಕ್ಷದ ಸಂಸದರು ಅಥವಾ ಸದಸ್ಯರು ಮನಬಂದಂತೆ ಹೇಳಿಕೆ ನೀಡುತ್ತಿದ್ದರೆ ಬಿಜೆಪಿ ಪ್ರತಿಷ್ಠೆ ಹಾಳಾಗುವುದರಲ್ಲಿ ಎರಡು ಮಾತಿಲ್ಲ. ಆದ್ದರಿಂದ ಪಕ್ಷದ ಎಲ್ಲಾ ಸಂಸದರು ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುವಾಗ ಯೋಚಿಸಿ ಮಾತನಾಡಬೇಕು ಎಂದು ಪಕ್ಷದ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ, ಮರುಮಂತಾಂತರ ಕುರಿತಂತೆ ಸಮಗ್ರ ಹಾಗೂ ಪ್ರಬಲ ಕಾನೂನು ಜಾರಿಯಾಗಬೇಕಿದೆ. ಆದರೆ, ಇದಕ್ಕೆ ಬೆಂಬಲ ಸೂಚಿಸಲು ಯಾವುದೇ ಜ್ಯಾತ್ಯಾತೀತ ಪಕ್ಷಗಳು ಮುಂದೆ ಬಾರದಿರುವುದು ದುರಾದೃಷ್ಟಕರ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಇದೇ ವೇಳೆ ಮಾಧ್ಯಮಗಳ ಮೇಲೆ ಕಿಡಿಕಾರಿರುವ ಅಮಿತ್ ಶಾ, ಈ ಕುರಿತ ಮಾಧ್ಯಮಗಳ ಚರ್ಚೆಯಿಂದ ಮರುಮತಾಂತರವನ್ನು ನಿಲ್ಲಿಸಲು ಸಾಧ್ಯವಿದೆಯೇ? ಮಾಧ್ಯವೇ ದೇಶ ಹಾಗೂ ಕಾನೂನನ್ನು ಮುನ್ನಡೆಸುತ್ತಿದೆಯೇ? ಕಾನೂನು ದೇಶವನ್ನು ಮುನ್ನಡೆಸುತ್ತಿದೆ ಎಂದಾದರೆ ಮರುಮತಾಂತರ ಕುರಿತ ಬಲವಾದ ಶಾಸನದ ಅಗತ್ಯವಿದೆ ಎಂದು ಹೇಳಿದರು.

ಮೀರತ್‌ನಲ್ಲಿ ನಿನ್ನೆ ನಡೆದ ಎರಡನೇ ಸಂತ ಸಮಾಗಮ ಮಹೋತ್ಸವದಲ್ಲಿ ಮಾತನಾಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ 'ಹಿಂದೂ ಮಹಿಳೆಯರು ಕನಿಷ್ಟ ಪಕ್ಷ ನಾಲ್ಕು ಮಕ್ಕಳನ್ನಾದರು ಹೆರಬೇಕು, ಒಂದು ಮಗುವನ್ನು ನಮಗೆ ನೀಡಿ, ಮತ್ತೊಂದು ಮಗುವನ್ನು ದೇಶದ ಗಡಿ ರಕ್ಷಣೆಗೆ ನೀಡಬೇಕು' ಎಂದು ಹೇಳಿದ್ದರು.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಮಿತ್ ಶಾ, ಈ ಹೇಳಿಕೆ ಅವರ ವೈಯಕ್ತಿಕವಾದ್ದರಿಂದ, ಇದಕ್ಕೆ ಪಕ್ಷ ಹೊಣೆಯಲ್ಲ. ಈ ರೀತಿಯ ಹೇಳಿಕೆಗಳಿಂದ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಮೇಲೆ ಯಾವ ರೀತಿಯ ಪರಿಣಾಮವೂ ಬೀರುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT