ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರದ ಸತಾರದಲ್ಲಿ ಸ್ಫೋಟ: ಮೂರು ಸಾವು

ಸತಾರದ ಪವನ ವಿದ್ಯುತ್ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು...

ಸತಾರ: ಮಹಾರಾಷ್ಟ್ರದ ಸತಾರದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ನೌಕರರು ಸಾವನ್ನಪ್ಪಿದ್ದಾರೆ.

ಸತಾರದ ಪವನ ವಿದ್ಯುತ್ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ನಿರ್ಮಾಣ ಹಂತದಲ್ಲಿ ಪವನ ವಿದ್ಯುತ್ ಕೇಂದ್ರದ ಕಾಮಗಾರಿ ವೇಳೆ ದುರಂತ ಸಂಭವಿಸಿದೆ. ಜಿಲೆಟಿನ್ ಕಡ್ಡಿಗಳ ಬಳಕೆಯಿಂದ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ ಸು ಮಾರು 9.30ರ ವೇಳೆಗೆ ಪವನ ವಿದ್ಯುತ್ ತಯಾರಿಕೆ ಘಟಕದಲ್ಲಿ ಜಿಲೆಟಿನ್ ಕಡ್ಡಿಗಳನ್ನು ಬಳಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ.

ಈ ವೇಳೆ ಕೆಲಸ ಮಾಡುತ್ತಿದ್ದವರ ಪೈಕಿ ಸ್ಥಳದಲ್ಲೇ ಮೂವರು ನೌಕರರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸತಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಶಶಿಕಾಂತ್ ಕುಲಕರ್ಣಿ(40), ದದಾಸೋ ರಾಮಚಂದ್ರ ಜಗದಲೆ(52) ಮತ್ತು ಸಂದೀಪ್ ಉತ್ತಮ್ ಮನೆ(35) ಎಂದು ಗುರುತಿಸಲಾಗಿದೆ. ಮೃತರೆಲ್ಲರು ಸತಾರ ಮೂಲದವರು ಎಂದು ತಿಳಿದುಬಂದಿದೆ.

ಈ ಕುರಿತು ದಹಿವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆಯನ್ನು ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT