ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಝಕೀವುರ್ ರೆಹಮಾನ್ ಲಖ್ವಿ 
ದೇಶ

ಅಪಹರಣ ಕೇಸಲ್ಲಿ ಲಖ್ವಿಗೆ ಜಾಮೀನು, ಆದರೂ ಜೈಲೇ ಗತಿ

6 ವರ್ಷದ ಹಿಂದಿನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಬಂಧಿತನಾಗಿದ್ದ ಮುಂಬೈ...

ಇಸ್ಲಾಮಾಬಾದ್: 6 ವರ್ಷದ ಹಿಂದಿನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಬಂಧಿತನಾಗಿದ್ದ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಝಕೀವುರ್ ರೆಹಮಾನ್ ಲಖ್ವಿಗೆ ಪಾಕಿಸ್ತಾನದ ಕೆಳ ಹಂತದ ನ್ಯಾಯಾಲಯವು ಶುಕ್ರವಾರ ಜಾಮೀನು ನೀಡಿದೆ. ಆದರೆ ಸುಪ್ರೀಂಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಲಖ್ವಿ ಮತ್ತೆ ಜೈಲು ವಾಸವನ್ನು ಮುಂದುವರೆಸುವಂತಾಗಿದೆ.

ಮುಂಬೈ ದಾಳಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆ ತಂದ ಪ್ರಕರಣಗಳಲ್ಲಿ ಕಳೆದ ತಿಂಗಳು ಲಖ್ವಿಗೆ ಜಾಮೀನು ಲಭಿಸಿತ್ತು. ಲಖ್ವಿ ಬಿಡುಗಡೆಯಾಗುತ್ತಾರೆ ಎನ್ನುವಷ್ಟರಲ್ಲಿ 6 ವರ್ಷದ ಹಿಂದಿನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪೊಲೀಸರು ಮತ್ತೆ ಲಖ್ವಿಯನ್ನು ಬಂಧಿಸಿದ್ದರು. ನಂತರ ಪಾಕ್ ಸರ್ಕಾರದ ಆದೇಶವನ್ನು ಹೈಕೋರ್ಟ್ ಅಮಾನತು ಮಾಡಿ ಆದೇಶ ನೀಡಿತ್ತು. ಇದಕ್ಕೆ ಪಾಕ್ ಸರ್ಕಾರ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಝಕಿ ಉರ್ ರೆಹಮಾನ್ ಲಖ್ವಿ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 2009ರಿಂದಲೂ ಜೈಲುವಾಸದಲ್ಲಿದ್ದ. ಕಳೆದ ವರ್ಷ ಡಿ.18ರಂದು ಭಯೋತ್ಪಾದನಾ ನಿಗ್ರಹ ಕೋರ್ಟ್ ಲಖ್ವಿಗೆ ಜಾಮೀನು ನೀಡಿತ್ತು. ಆದರೆ ಮತ್ತೆ ಆತನನ್ನು ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿದ್ದ ಲಖ್ವಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದನು. ನಂತರ ಹೈಕೋರ್ಟ್ ಆತನ ಬಂಧನದ ಆದೇಶ ಅಮಾನತಿನಲ್ಲಿಟ್ಟು ಜಾಮೀನು ನೀಡಿತ್ತು. ಪಾಕಿಸ್ತಾನದ ಈ ನಿಲುವಿಗೆ ದೇಶದಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಲಖ್ವಿ ಬಿಡುಗಡೆ ಕುರಿತಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT