ಮೆಹರ್ ತರಾರ್ 
ದೇಶ

ಸುನಂದಾ ಹತ್ಯೆ: ಪಾಕ್ ಪತ್ರಕರ್ತೆ ವಿಚಾರಣೆ ಸಾಧ್ಯತೆ

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು,..

ನವದೆಹಲಿ: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದೀಗ ತರೂರ್ ಅವರೊಂದಿಗೆ ಅಕ್ರಮ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಪತ್ರಕರ್ತೆ ಮೆಹರ್ ತರಾರ್ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಮೆಹರ್ ವಿಚಾರಣೆಗಾಗಿ ಕೆಲವು ಪ್ರಶ್ನೆಗಳನ್ನು ಸಿದ್ಧಪಡಿಸಿಕೊಂಡಿರುವ ದೆಹಲಿ ಪೊಲೀಸರು, ಅದನ್ನು ಇಮೇಲ್ ಮೂಲಕ ಪಾಕ್ ಪತ್ರಕರ್ತೆಗೆ ರವಾನಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುನಂದಾ ಸಾವಿಗು ಮುನ್ನ ಶಶಿ ತರೂರ್ ಅವರನ್ನು ಭೇಟಿ ಮಾಡಿದ್ದ ಮೆಹರ್, ಸುನಂದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಯಾವುದೇ ಪ್ರಶ್ನೆಗೂ ತಾನು ಉತ್ತರಿಸಲು ಸಿದ್ಧ ಎಂದು ಈಗಾಗಲೇ ಸಾರ್ವಜನಿಕವಾಗಿಯೇ ಹೇಳಿದ್ದಾರೆ.

ಈ ಮಧ್ಯೆ, ಮೆಹರ್ ತರಾರ್ ತಮ್ಮ ವೈವಾಹಿಕ ಜೀವನದಲ್ಲಿ ಅಡ್ಡ ಬರುತ್ತಿದ್ದಾಳೆ ಎಂದು ಸುನಂದಾ ಪತಿ ತರೂರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು ಎಂದು ಶಶಿ ತರೂರ್ ಮನೆಗೆಲಸದಾಳು ನಾರಾಯಣ್ ಸಿಂಗ್ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಇದಲ್ಲದೆ, ಈ ಸಂಬಂಧ ಕೊಠಡಿಯಲ್ಲಿ ತರೂರ್ ಹಾಗೂ ಪುಷ್ಕರ್ ನಡುವೆ ಜಗಳವಾಗಿ ಹೊಡೆದಾಡಿಕೊಂಡಿದ್ದು, ಸುನಂದಾ ಹೊಡೆದ ಏಟಿಗೆ ತರೂರ್ ಕಾಲಿಗೆ ಪೆಟ್ಟಾಗಿತ್ತು ಎಂದೂ ನಾರಾಯಣ್ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT