ಮಹಿಂದಾ ರಾಜಪಕ್ಸೆ 
ದೇಶ

ರಾಜಪಕ್ಸೆಗೆ ಸಂಕಷ್ಟ ಶುರು

10 ವರ್ಷಗಳ ಕಾಲ ಶ್ರೀಲಂಕಾದ ಅಧ್ಯಕ್ಷರಾಗಿ ಮೆರೆದಿದ್ದ ಮಹಿಂದಾ ರಾಜಪಕ್ಸೆಗೆ ಸಂಕಷ್ಟಗಳು ಶುರುವಾಗಿವೆ...

ಕೊಲೊಂಬೋ: 10 ವರ್ಷಗಳ ಕಾಲ ಶ್ರೀಲಂಕಾದ ಅಧ್ಯಕ್ಷರಾಗಿ ಮೆರೆದಿದ್ದ ಮಹಿಂದಾ ರಾಜಪಕ್ಸೆಗೆ ಸಂಕಷ್ಟಗಳು ಶುರುವಾಗಿವೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲುತ್ತಿದ್ದಂತೆ ಅವರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರತೊಡಗಿವೆ.

ಚುನಾವಣೆ ಮತ ಎಣಿಕೆ ನಡೆಯುತ್ತಿದ್ದಾಗ, ತಾನು ಸೋಲುತ್ತಿದ್ದೇನೆ ಎನ್ನುವ ಸುಳಿವು ಸಿಗುತ್ತಿದ್ದಂತೆ ಹೆಚ್ಚಿನ ಸೇವೆ ನಿಯೋಜಿಸುವಂತೆ ರಾಜಪಕ್ಸೆ ಅವರು ಸೇನಾ ಮುಖ್ಯಸ್ಥರ ಮೇಲೆ ಒತ್ತಡ ತಂದಿದ್ದರು ಎಂಬ ವಿಚಾರ ಈಗ ಬಹಿರಂಗವಾಗಿದೆ.

ರಾಜಪಕ್ಸೆ ಅವರು ಸೇನಾ ಮುಖ್ಯಸ್ಥರಿಗೆ ಒತ್ತಡ ತಂದಾಗ, ತಾನು ಯಾವುದೇ ಕಾನೂನುಬಾಹಿರ ಕ್ರಮ ಕೈಗೊಳ್ಳಲಾರೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದರು ಎಂದು ಹೊಸ ಸರ್ಕಾರದ ವಕ್ತಾರ ತಿಳಿಸಿದ್ದಾರೆ.

ಮೊದಲ ಭೇಟಿ ಭಾರತಕ್ಕೆ: ಶ್ರೀಲಂಕಾದ ನೂತನ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಮೊದಲ ವಿದೇಶ ಭೇಟಿ ಎಲ್ಲಿಗೆ ಗೊತ್ತೇ? ಭಾರತಕ್ಕೆ. ಹೊಸ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅವರು ಮೊದಲ ವಿದೇಶ ಭೇಟಿಗೆ ನಮ್ಮ ದೇಶವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಅಧಿಕಾರ ಸ್ವೀಕರಿಸಿದ ಮಾರನೇ ದಿನವೇ ಸದ್ಭಾವನೆಯ ಸಂಕೇತವಾಗಿ ಲಂಕಾದಲ್ಲಿ ಬಂಧಿತರಾಗಿರುವ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT