ಮಹಿಂದಾ ರಾಜಪಕ್ಸೆ 
ದೇಶ

ರಾಜಪಕ್ಸೆಗೆ ಸಂಕಷ್ಟ ಶುರು

10 ವರ್ಷಗಳ ಕಾಲ ಶ್ರೀಲಂಕಾದ ಅಧ್ಯಕ್ಷರಾಗಿ ಮೆರೆದಿದ್ದ ಮಹಿಂದಾ ರಾಜಪಕ್ಸೆಗೆ ಸಂಕಷ್ಟಗಳು ಶುರುವಾಗಿವೆ...

ಕೊಲೊಂಬೋ: 10 ವರ್ಷಗಳ ಕಾಲ ಶ್ರೀಲಂಕಾದ ಅಧ್ಯಕ್ಷರಾಗಿ ಮೆರೆದಿದ್ದ ಮಹಿಂದಾ ರಾಜಪಕ್ಸೆಗೆ ಸಂಕಷ್ಟಗಳು ಶುರುವಾಗಿವೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲುತ್ತಿದ್ದಂತೆ ಅವರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರತೊಡಗಿವೆ.

ಚುನಾವಣೆ ಮತ ಎಣಿಕೆ ನಡೆಯುತ್ತಿದ್ದಾಗ, ತಾನು ಸೋಲುತ್ತಿದ್ದೇನೆ ಎನ್ನುವ ಸುಳಿವು ಸಿಗುತ್ತಿದ್ದಂತೆ ಹೆಚ್ಚಿನ ಸೇವೆ ನಿಯೋಜಿಸುವಂತೆ ರಾಜಪಕ್ಸೆ ಅವರು ಸೇನಾ ಮುಖ್ಯಸ್ಥರ ಮೇಲೆ ಒತ್ತಡ ತಂದಿದ್ದರು ಎಂಬ ವಿಚಾರ ಈಗ ಬಹಿರಂಗವಾಗಿದೆ.

ರಾಜಪಕ್ಸೆ ಅವರು ಸೇನಾ ಮುಖ್ಯಸ್ಥರಿಗೆ ಒತ್ತಡ ತಂದಾಗ, ತಾನು ಯಾವುದೇ ಕಾನೂನುಬಾಹಿರ ಕ್ರಮ ಕೈಗೊಳ್ಳಲಾರೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದರು ಎಂದು ಹೊಸ ಸರ್ಕಾರದ ವಕ್ತಾರ ತಿಳಿಸಿದ್ದಾರೆ.

ಮೊದಲ ಭೇಟಿ ಭಾರತಕ್ಕೆ: ಶ್ರೀಲಂಕಾದ ನೂತನ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಮೊದಲ ವಿದೇಶ ಭೇಟಿ ಎಲ್ಲಿಗೆ ಗೊತ್ತೇ? ಭಾರತಕ್ಕೆ. ಹೊಸ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅವರು ಮೊದಲ ವಿದೇಶ ಭೇಟಿಗೆ ನಮ್ಮ ದೇಶವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಅಧಿಕಾರ ಸ್ವೀಕರಿಸಿದ ಮಾರನೇ ದಿನವೇ ಸದ್ಭಾವನೆಯ ಸಂಕೇತವಾಗಿ ಲಂಕಾದಲ್ಲಿ ಬಂಧಿತರಾಗಿರುವ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT