ಅಸರಾಂ ಬಾಪು 
ದೇಶ

ಅಸರಾಂ ರೇಪ್ ಕೇಸ್‌ನ ಸಾಕ್ಷಿ ಹತ್ಯೆ: ಹಂತಕರ ಪತ್ತೆಗೆ ತಂಡ ರಚನೆ

ವಿವಾದಾತ್ಮಕ ದೇವಮಾನವ ಅಸರಾಂ ಬಾಪು...

ಮುಜಾಫರ್‌ನಗರ: ವಿವಾದಾತ್ಮಕ ದೇವಮಾನವ ಅಸರಾಂ ಬಾಪು ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಭಾರಿ ಹಿನ್ನೆಡೆಯಾಗಿದೆ. ಪ್ರಕರಣದ ಪ್ರಮುಖ ಸಾಕ್ಷಿಯನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಸೋಮವಾರ ವರದಿ ಮಾಡಲಾಗಿದೆ.

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಅಸರಾಂ ರೇಪ್ ಕೇಸ್‌ನ ಪ್ರಮುಖ ಸಾಕ್ಷಿಯಾಗಿದ್ದ 35 ವರ್ಷ ಅಖಿಲ್ ಗುಪ್ತಾ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಪ್ತಾ ಅವರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಅಸರಾಂ ಬಾಪು ಆಶ್ರಮದಲ್ಲಿ ಅಡುಗೆ ಕೆಲಸದಾಳು ಮತ್ತು ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು. ಈ ಪ್ರಕರಣ ಸಂಬಂಧ ಗುಜರಾತ್ ಪೊಲೀಸರು ಗುಪ್ತಾ ಅವರಿಂದ ಹೇಳಿಕೆ ಪಡೆದಿದ್ದರು ಮತ್ತು ಅವರನ್ನು ಪ್ರಮುಖ ಸಾಕ್ಷಿ ಎಂದು ಸಹ ಪರಿಗಣಿಸಿದ್ದರು.

ಈ ಸಂಬಂಧ ಅಖಿಲ್ ಗುಪ್ತಾ ಸಂಬಂಧಿ ಆಶಿಶ್ ಗುಪ್ತ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಗುಪ್ತಾ ಹಂತಕರ ಪತ್ತೆಗಾಗಿ ನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರವಣ್ ಕುಮಾರ್ ನೇತೃತ್ವದಲ್ಲಿ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಎಚ್.ಎನ್.ಸಿಂಗ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಎನ್‌ಸಿಪಿ ನಿರ್ಧಾರವನ್ನು ಬೆಂಬಲಿಸುತ್ತೇವೆ: ಫಡ್ನವೀಸ್

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

SCROLL FOR NEXT