ಅಸರಾಂ ಬಾಪು 
ದೇಶ

ಅಸರಾಂ ರೇಪ್ ಕೇಸ್‌ನ ಸಾಕ್ಷಿ ಹತ್ಯೆ: ಹಂತಕರ ಪತ್ತೆಗೆ ತಂಡ ರಚನೆ

ವಿವಾದಾತ್ಮಕ ದೇವಮಾನವ ಅಸರಾಂ ಬಾಪು...

ಮುಜಾಫರ್‌ನಗರ: ವಿವಾದಾತ್ಮಕ ದೇವಮಾನವ ಅಸರಾಂ ಬಾಪು ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಭಾರಿ ಹಿನ್ನೆಡೆಯಾಗಿದೆ. ಪ್ರಕರಣದ ಪ್ರಮುಖ ಸಾಕ್ಷಿಯನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಸೋಮವಾರ ವರದಿ ಮಾಡಲಾಗಿದೆ.

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಅಸರಾಂ ರೇಪ್ ಕೇಸ್‌ನ ಪ್ರಮುಖ ಸಾಕ್ಷಿಯಾಗಿದ್ದ 35 ವರ್ಷ ಅಖಿಲ್ ಗುಪ್ತಾ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಪ್ತಾ ಅವರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಅಸರಾಂ ಬಾಪು ಆಶ್ರಮದಲ್ಲಿ ಅಡುಗೆ ಕೆಲಸದಾಳು ಮತ್ತು ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು. ಈ ಪ್ರಕರಣ ಸಂಬಂಧ ಗುಜರಾತ್ ಪೊಲೀಸರು ಗುಪ್ತಾ ಅವರಿಂದ ಹೇಳಿಕೆ ಪಡೆದಿದ್ದರು ಮತ್ತು ಅವರನ್ನು ಪ್ರಮುಖ ಸಾಕ್ಷಿ ಎಂದು ಸಹ ಪರಿಗಣಿಸಿದ್ದರು.

ಈ ಸಂಬಂಧ ಅಖಿಲ್ ಗುಪ್ತಾ ಸಂಬಂಧಿ ಆಶಿಶ್ ಗುಪ್ತ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಗುಪ್ತಾ ಹಂತಕರ ಪತ್ತೆಗಾಗಿ ನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರವಣ್ ಕುಮಾರ್ ನೇತೃತ್ವದಲ್ಲಿ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಎಚ್.ಎನ್.ಸಿಂಗ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!