ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್‌ 
ದೇಶ

ಶಾರದಾ ಚಿಟ್‌ಫಂಡ್: ಮುಕುಲ್ ರಾಯ್‌ಗೆ ಸಮನ್ಸ್

ಬಹುಕೋಟಿ ಹಗರಣ ಶಾರದಾ ಚಿಟ್‌ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸೋಮವಾರ ಟಿಎಂಸಿ...

ಕೋಲ್ಕತಾ: ಬಹುಕೋಟಿ ಹಗರಣ ಶಾರದಾ ಚಿಟ್‌ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸೋಮವಾರ ಟಿಎಂಸಿ ನಾಯಕ ಮುಕುಲ್ ರಾಯ್‌ಗೆ ಸಮನ್ಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಟಿಎಂಸಿ ನಾಯಕರನ್ನು ಬಂಧಿಸಿರುವ ಸಿಬಿಐ ಇದೀಗ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಮುಕುಲ್ ರಾಯ್ ಅವರ ಹೆಸರು ಕೇಳಿಬಂದಿತ್ತು.

ಶಾರದಾ ಚಿಟ್‌ಫಂಡ್ ಹಗರಣವನ್ನು ತನಿಖೆ ನಡೆಸುತ್ತಿರುವ ಸಿಬಿಐನ ಅಧಿಕಾರಿಗಳು, ಕಂಪನಿಯ ಮೇಲಧಿಕಾರಿ ಸುದೀಪ್ತ ಸೇನ್ ಅವರ ದೂರವಾಣಿ ಕರೆಗಳ ದಾಖಲೆಗಳನ್ನು ಪರಿಶೀಲಿಸುವ ವೇಳೆ ಸುದೀಪ್ತ ಸೇನ್ ಹಲವು ಬಾರಿ ಟಿಎಂಸಿ ನಾಯಕ ಮುಕುಲ್ ರಾಯ್ ಅವರೊಂದಿಗೆ ಮಾತನಾಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಮುಕುಲ್ ಅವರಿಗೆ ಸಿಬಿಐ ಅಧಿಕಾರಿಗಳು ಮೇಲ್ ಮೂಲಕ ಸಮನ್ಸ್ ಜಾರಿ ಮಾಡಿದೆ.

ಶಾರದಾ ಗ್ರೂಪ್ ನಡೆಸುತ್ತಿರುವ ಚಿಟ್‌ಫಂಡ್ ಸಮೂಹ ಸಂಸ್ಥೆಯಾಗಿರುವ ಶಾರದಾ ಗ್ರೂಪ್ ಮೀಡಿಯಾ ನಡೆಸುತ್ತಿದ್ದ ಪತ್ರಿಕೆ ಮತ್ತಿತರ ವಿಭಾಗಗಳ ಕೆಲಸಗಾರರಿಗೆ ವೇತನ ನೀಡಲಾಗಲಿಲ್ಲ.ಅಕ್ರಮ ವ್ಯವಹಾರಗಳ ಮೂಲಕ ಉದ್ಯೋಗಿಗಳನ್ನು ವಂಚಿಸಲಾಗುತ್ತಿದೆ ಎಂಬ ಮಾಹಿತಿ 2013ರಲ್ಲಿ ಬೆಳಕಿಗೆ ಬಂತು. ಅದೇ ವೇಳೆಗೆ ಬಂಗಾಳ, ಒಡಿಶಾ, ತ್ರಿಪುರಾ, ಜಾರ್ಖಂಡ್ ಮತ್ತು ಅಸ್ಸಾಂನ ಸಾವಿರಾರು ಜನರು ತಾವೂ ಹೂಡಿದ್ದ ಹಣ ವಾಪಸ್ ನೀಡುವಂತೆ ಆಗ್ರಹಿಸಿ ಶಾರದಾ ಚಿಟ್‌ಫಂಡ್ ವಿರುದ್ಧ ಪ್ರತಿಭಟನೆಗಿಳಿದರು. ಈ ಆರೋಪಗಳ ಸಂಬಂಧ ಪಶ್ಚಿಮ ಬಂಗಾಳ ಸರಕಾರ ತನಿಖೆಗೆ ಆಯೋಗವನ್ನೂ ರಚಿಸಿತ್ತು. 2013ರ ಏಪ್ರಿಲ್ 23 ರಂದು ಶಾರದಾ ಗ್ರೂಪ್ ಅಧ್ಯಕ್ಷ ಸುದಿಪ್ತ ಸೇನ್ ಹಾಗೂ ಅವರ ಇಬ್ಬರು ನಿಕಟ ವರ್ತಿಗಳ ಸಹಿತ ಕಾಶ್ಮೀರದ ಸೊನ್ಮಾರ್ಗ್‌ನಲ್ಲಿ ಬಂಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT