ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್‌ 
ದೇಶ

ಶಾರದಾ ಚಿಟ್‌ಫಂಡ್: ಮುಕುಲ್ ರಾಯ್‌ಗೆ ಸಮನ್ಸ್

ಬಹುಕೋಟಿ ಹಗರಣ ಶಾರದಾ ಚಿಟ್‌ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸೋಮವಾರ ಟಿಎಂಸಿ...

ಕೋಲ್ಕತಾ: ಬಹುಕೋಟಿ ಹಗರಣ ಶಾರದಾ ಚಿಟ್‌ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸೋಮವಾರ ಟಿಎಂಸಿ ನಾಯಕ ಮುಕುಲ್ ರಾಯ್‌ಗೆ ಸಮನ್ಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಟಿಎಂಸಿ ನಾಯಕರನ್ನು ಬಂಧಿಸಿರುವ ಸಿಬಿಐ ಇದೀಗ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಮುಕುಲ್ ರಾಯ್ ಅವರ ಹೆಸರು ಕೇಳಿಬಂದಿತ್ತು.

ಶಾರದಾ ಚಿಟ್‌ಫಂಡ್ ಹಗರಣವನ್ನು ತನಿಖೆ ನಡೆಸುತ್ತಿರುವ ಸಿಬಿಐನ ಅಧಿಕಾರಿಗಳು, ಕಂಪನಿಯ ಮೇಲಧಿಕಾರಿ ಸುದೀಪ್ತ ಸೇನ್ ಅವರ ದೂರವಾಣಿ ಕರೆಗಳ ದಾಖಲೆಗಳನ್ನು ಪರಿಶೀಲಿಸುವ ವೇಳೆ ಸುದೀಪ್ತ ಸೇನ್ ಹಲವು ಬಾರಿ ಟಿಎಂಸಿ ನಾಯಕ ಮುಕುಲ್ ರಾಯ್ ಅವರೊಂದಿಗೆ ಮಾತನಾಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಮುಕುಲ್ ಅವರಿಗೆ ಸಿಬಿಐ ಅಧಿಕಾರಿಗಳು ಮೇಲ್ ಮೂಲಕ ಸಮನ್ಸ್ ಜಾರಿ ಮಾಡಿದೆ.

ಶಾರದಾ ಗ್ರೂಪ್ ನಡೆಸುತ್ತಿರುವ ಚಿಟ್‌ಫಂಡ್ ಸಮೂಹ ಸಂಸ್ಥೆಯಾಗಿರುವ ಶಾರದಾ ಗ್ರೂಪ್ ಮೀಡಿಯಾ ನಡೆಸುತ್ತಿದ್ದ ಪತ್ರಿಕೆ ಮತ್ತಿತರ ವಿಭಾಗಗಳ ಕೆಲಸಗಾರರಿಗೆ ವೇತನ ನೀಡಲಾಗಲಿಲ್ಲ.ಅಕ್ರಮ ವ್ಯವಹಾರಗಳ ಮೂಲಕ ಉದ್ಯೋಗಿಗಳನ್ನು ವಂಚಿಸಲಾಗುತ್ತಿದೆ ಎಂಬ ಮಾಹಿತಿ 2013ರಲ್ಲಿ ಬೆಳಕಿಗೆ ಬಂತು. ಅದೇ ವೇಳೆಗೆ ಬಂಗಾಳ, ಒಡಿಶಾ, ತ್ರಿಪುರಾ, ಜಾರ್ಖಂಡ್ ಮತ್ತು ಅಸ್ಸಾಂನ ಸಾವಿರಾರು ಜನರು ತಾವೂ ಹೂಡಿದ್ದ ಹಣ ವಾಪಸ್ ನೀಡುವಂತೆ ಆಗ್ರಹಿಸಿ ಶಾರದಾ ಚಿಟ್‌ಫಂಡ್ ವಿರುದ್ಧ ಪ್ರತಿಭಟನೆಗಿಳಿದರು. ಈ ಆರೋಪಗಳ ಸಂಬಂಧ ಪಶ್ಚಿಮ ಬಂಗಾಳ ಸರಕಾರ ತನಿಖೆಗೆ ಆಯೋಗವನ್ನೂ ರಚಿಸಿತ್ತು. 2013ರ ಏಪ್ರಿಲ್ 23 ರಂದು ಶಾರದಾ ಗ್ರೂಪ್ ಅಧ್ಯಕ್ಷ ಸುದಿಪ್ತ ಸೇನ್ ಹಾಗೂ ಅವರ ಇಬ್ಬರು ನಿಕಟ ವರ್ತಿಗಳ ಸಹಿತ ಕಾಶ್ಮೀರದ ಸೊನ್ಮಾರ್ಗ್‌ನಲ್ಲಿ ಬಂಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT