ಸುಬ್ರಹ್ಮಣ್ಯಸ್ವಾಮಿ ವಿರುದ್ಧ ತರೂರ್ ಕಿಡಿ... 
ದೇಶ

ಸ್ವಾಮಿಗೆ ಕೊಲೆಗಾರ ಯಾರೆಂಬುದು ಗೊತ್ತಿದ್ದರೆ ಹೆಸರು ಬಹಿರಂಗಪಡಿಸಲಿ

ಸುಬ್ರಹ್ಮಣ್ಯಸ್ವಾಮಿ ವಿರುದ್ಧ ತರೂರ್ ಆರೋಪ...

ನವದೆಹಲಿ: ಸುನಂದಾ ಸಾವು ಪ್ರಕರಣಕ್ಕೆ ಸಂಬಂಧಿಸಿ ಪತಿ, ಸಂಸದ ಶಶಿ ತರೂರ್ ಮತ್ತು ಬಿಜೆಪಿ ಸಂಸದ ಸುಬ್ರಹ್ಮಣ್ಯಸ್ವಾಮಿ ನಡುವೆ ಮಂಗಳವಾರ ತೀವ್ರ ವಾಕ್ಸಮರ ನಡೆದಿದೆ.

ಸುನಂದಾ ಸಾವು ಪ್ರಕರಣದಲ್ಲಿ ಪದೇ ಪದೆ ಮಾತನಾಡುತ್ತಿದ್ದ ಸುಬ್ರಹ್ಮಣ್ಯ ಸ್ವಾಮಿ ವಿರುದ್ಧ ತೀವ್ರ ಕಿಡಿಕಿಡಿಯಾಗಿರುವ ತರೂರ್, ಅವರು ಯಾರ? ಅವರಿಗೆ ಕೊಲೆಗಾರನ ಬಗ್ಗೆ ಗೊತ್ತಿದ್ದರೆ ಪೊಲೀಸರಿಗೆ ತಿಳಿಸಲಿ ಎಂದು ಸವಾಲು ಹಾಕಿದ್ದಾರೆ.

ಇದಕ್ಕೆ ಸ್ವಾಮಿ ಕೂಡ ತೀವ್ರ ತಿರುಗೇಟು ನೀಡಿದ್ದಾರೆ. ನಾನು ಸಾಕ್ಷಿ ಇಲ್ಲದೆ ಮಾತನಾಡುವುದಿಲ್ಲ. ಸಮಯ ಬಂದಾಗ ನಾನು ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಜತೆಗೆ, ನನಗೆ ಕೊಲೆಗಾರ ಯಾರೆಂಬುದು ಗೊತ್ತು ಎಂದು ನಾನು ಹೇಳಿಲ್ಲ. ಆದರೆ, ತರೂರ್ ಅವರಿಗೆ ಕೊಲೆಗಾರ ಯಾರೆಂಬುದು ಗೊತ್ತಿದೆ ಎನ್ನುವುದಷ್ಟೇ ಹೇಳಿದ್ದೆ ಎಂದೂ ಸ್ಪಷ್ಟನೆ ನೀಡಿದ್ದಾರೆ.

ಕಳೆದ ವಾರ ಕೂಡ ಸ್ವಾಮಿ ಅವರು, ತರೂರ್‌ಗೆ ಕೊಲೆಗಾರ ಯಾರೆನ್ನುವುದು ಗೊತ್ತು. ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT