ಮಕರ ಜ್ಯೋತಿ ದರ್ಶನ 
ದೇಶ

ಮಕರ ಜ್ಯೋತಿ ದರ್ಶನ ಪಡೆದು ಪುನೀತರಾದ ಭಕ್ತರು

ಪ್ರತಿ ವರ್ಷದಂತೆ ಈ ಬಾರಿಯೂ...

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಪಡೆದ ಅಯ್ಯಪ್ಪ ಸ್ವಾಮಿ ಭಕ್ತರು ಪುನೀತರಾದರು.

ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಸಂಜೆ 6.55ರ ಸುಮಾರಿಗೆ ಜ್ಯೋತಿ ಮೂರು ಬಾರಿ ಕಾಣಿಸಿಕೊಂಡಿತ್ತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಜ್ಯೋತಿಯನ್ನು ಕಣ್ತುಂಬಿಕೊಂಡರು.

ಯಾವುದೇ ಬೇದಭಾವವಿಲ್ಲದೆ ಕಡು ಬಡವರಿಂದ ಶ್ರೀಮಂತರವರೆಗೂ ಪ್ರತಿ ವರ್ಷವೂ ಶಬರಿಮಲೆಗೆ ಭಕ್ತಾದಿಗಳಾಗಿ ಆಗಮಿಸಿ ಅಯ್ಯಪ್ಪ ಸ್ವಾಮಿ ಹಾಗೂ ಜ್ಯೋತಿಯ ದರ್ಶನ ಪಡೆದು ಪುನೀತರಾಗುವರು.

ಲಕ್ಷಾಂತರ ಭಕ್ತರು ಮಕರ ಜ್ಯೋತಿಯಂದು ಶಬರಿಮಲೆಗೆ ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಬಂದೋಬಸ್ತ್ ಹಾಗೂ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಶಬರಿಮಲೆಗೆ ಕೇವಲ ದಕ್ಷಿಣ ಭಾರತ ರಾಜ್ಯಗಳಿಂದಷ್ಟೇ ಅಲ್ಲದೆ ಉತ್ತರ ಭಾರತದ ರಾಜ್ಯಗಳಿಂದಲೂ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT