ದೇಶ

ಸುನಂದಾ ಕೊಲೆ ಪ್ರಕರಣ: ಪೊಲೀಸರಿಗೆ ಒತ್ತಡ ಹೇರಿಲ್ಲ-ರಾಜನಾಥ್

ಕೇಂದ್ರ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣ ಸಂಬಂಧ...

ನವದೆಹಲಿ: ಕೇಂದ್ರ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರ ಮೇಲೆ ಯಾವುದೇ ಒತ್ತಡ ಹೇರಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.

ಸುನಾಂದಾ ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಒತ್ತಡ ಹೇರಿಲ್ಲ. ನಿಷ್ಪಕ್ಷಪಾತ ತನಿಕೆ ನಡೆಸಲಾಗುತ್ತಿದೆ. ತನಿಖಾ ತಂಡದ ಮೇಲೆ ಯಾವುದೇ ಒತ್ತಡ ಹೇರಿಲ್ಲ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಕೇಂದ್ರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ. ಈಗಾಗಲೇ ದೆಹಲಿ ಪೊಲೀಸರು ನಿಷ್ಪಕ್ಷಪಾತ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ರಾಜಕೀಯದ ಹುನ್ನಾರವಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಸರೋಜಿನಿ ನಗರ ಪೊಲೀಸರು ಸುನಂದಾ ಪುಷ್ಕರ್ ಅಸಹಜ ಸಾವು ಎಂದು ಹೇಳಿದ್ದು, ಪ್ರಕರಣವನ್ನು ಐಪಿಸಿ 302 ಅಡಿ ಕೊಲೆ ಎಂದು ದಾಖಲಿಸಿಕೊಂಡಿದ್ದರು. ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಪ್ರಸ್ತಾಪಿಸದೇ, ಅಪರಿಚಿತ ವ್ಯಕ್ತಿಗಳಿಂದ ಕೊಲೆ ನಡೆದಿದೆ ಎಂದು ನಮೂದಿಸಿಕೊಂಡಿದ್ದರು.

ದೆಹಲಿ ಉಪ ಪೊಲೀಸ್ ಆಯುಕ್ತ ಪ್ರೇಮನಾಥ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಚಿಸಿದ್ದು, ತನಿಖೆ ಕೈಗೊಂಡಿದೆ.

ಕಳೆದ ಜನವರಿ 17ರಂದು ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ 52 ವರ್ಷದ ಸುನಂದಾ ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಡಿ.29ರಂದು ನೀಡಿರುವ ಅಂತಿಮ ವೈದ್ಯಕೀಯ ವರದಿ 'ಸುನಂದಾ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದು ಅಸಹಜ ಸಾವು' ಎಂದು ಹೇಳಿತ್ತು.    

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT