ಒಬಾಮ ಭೇಟಿ ಹಿನ್ನೆಲೆ ಬಿಗಿ ಭದ್ರತೆ 
ದೇಶ

ತಾಜ್‌ಮಹಲ್‌ಗೆ 'ಬರಾಕ್ ಒಬಾಮ'

ಎಲ್ಲ ಅಂಗಡಿ ಮುಚ್ಚಾರೆ!...

ನವದೆಹಲಿ/ಆಗ್ರಾ: ಗಣರಾಜ್ಯೋತ್ಸವದ ವಿಶೇಷ ಅತಿಥಿಯಾಗಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಜ.27 ರಂದು ಆಗ್ರಾಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ದೆಹಲಿ-ಆಗ್ರಾ ಹೆದ್ದಾರಿಯ ಇಕ್ಕೆಲೆಗಳಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತೆ ದೆಹಲಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಕೇಂದ್ರಕ್ಕೆ ಮನವಿ ಮಾಡಿದೆ.

ರಸ್ತೆ ಮಾರ್ಗವಾಗಿ ಒಬಾಮ ಆಗ್ರಾಕ್ಕೆ ತೆರಳುವ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಬೇಕೆಂದು ರಾಯಭಾರ ಕಚೇರಿ ಒತ್ತಾಯಿಸಿದೆ.

ಇದರ ಜತೆಗೆ ಜ.24, 25ರಂದು ಕೇಂದ್ರ ದೆಹಲಿಯಲ್ಲಿರುವ ಲ್ಯೂಟನ್ಸ್ ಪ್ರದೇಶವನ್ನೂ ಬಂದ್ ಮಾಡಬೇಕೆಂದು ಅಮೆರಿಕ ಅಧಿಕಾರಿಗಳು ಸೂಚಿಸಿದ್ದಾರೆ. ಅದರ ಜತೆಗೆ ಕೇಂದ್ರ ಸರ್ಕಾರದ ಎಲ್ಲ ಭವನಗಳನ್ನು ಆ ಎರಡು ದಿನಗಳ ಕಾಲ ಮುಚ್ಚುವಂತೆ ಸೂಚಿಸಲಾಗಿದೆ.

ಶುಕ್ರವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಇದರ ಜತೆಗೆ ಇಂಡಿಯಾ ಗೇಟ್, ರಫೀ ಮಾರ್ಗ್ ಮತ್ತು ಇತರ ಪ್ರದೇಶಗಳನ್ನು 24ರಿಂದಲೇ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಬೇಕೆಂದು ಅಮೆರಿಕ ಅಧಿಕಾರಿಗಳು ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT