ದೇಶ

ತಪ್ಪು ತಿದ್ದುಕೊಳ್ಳದ ಪಾಕ್ ವಿರುದ್ಧ ರಾಜನಾಥ್ ಸಿಂಗ್ ಗರಂ

Mainashree

ನವದೆಹಲಿ: ಪಾಕಿಸ್ತಾನ ತನ್ನ ತಪ್ಪನ್ನು ಸರಿಪಡಿಸಿಕೊಳ್ಳದೇ ತನ್ನ ಉದ್ಧಟತನವನ್ನು ಮೆರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.

ಪಾಕಿಸ್ತಾನ ಮೂಲದ ಉಗ್ರರು ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ಸಂಬಂಧ ಪ್ರತಿಕ್ರಿಯಿಸಿರುವ ರಾಜನಾಥ್ ಸಿಂಗ್ ಪಾಕಿಸ್ತಾನ ಎಂದಿಗೂ ಬದಲಾಗುವುದಿಲ್ಲ. ಉಗ್ರರನ್ನು ಹತ್ತಿಕ್ಕುವ ಬದಲು ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಉದ್ಧಟತನವನ್ನಾ ಬಿಡದ ಪಾಕ್, ತನ್ನ ಚಾಳಿಯನ್ನು ಮುಂದುವರೆಸಿದೆ. ಪಾಕ್ ಬೆದರಿಕೆಗೆ ಭಾರತ ಹೆದರಲ್ಲ ಎಂದು ರಾಜನಾಥ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

SCROLL FOR NEXT