ಮಾಜಿ ಪ್ರಧಾನಿ ದೇವೇಗೌಡ 
ದೇಶ

ಅರ್ಕಾವತಿ ಗೊಂದಲ: ತನಿಖೆಗೆ ಆಗ್ರಹ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ 2001ರಿಂದಲೂ ಯಾವ್ಯಾವ...

ಬೆಂಗಳೂರು: ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ 2001ರಿಂದಲೂ ಯಾವ್ಯಾವ ಸರ್ಕಾರದ ಅವಧಿಯಲ್ಲಿ ಏನಾಗಿದೆ ಎಂಬ ಸಂಪೂರ್ಣ ತನಿಖೆ ಅಗತ್ಯವಿದೆ. ಆದರೆ ಈ ಕಾರ್ಯಕ್ಕೆ ಸರ್ಕಾರ ಮುಂದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕ ಎದುರಾಗಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, ಅರ್ಕಾವತಿ ಡಿನೋಟಿಫಿಕೇಷನ್‌ಗೆ ಸಂಬಂಧಿಸಿದಂತೆ 2001ರಿಂದ ಮುಖ್ಯಮಂತ್ರಿ ತನಿಖೆಗೆ ಆದೇಶಿಸಿದ್ದೇ ಆದಲ್ಲಿ ಸಿದ್ದರಾಮಯ್ಯನವರು ತಮ್ಮ ಸ್ಥಾನ ಉಳಿಸಿಕೊಳ್ಳುವುದು ಕಷ್ಟ. ಈ ರೀತಿ ಮಾಡಿದ್ದೇ ಆದಲ್ಲಿ ತಿಪ್ಪೆಯಲ್ಲಿ ಕೈ ಹಾಕಿ ಹೊಲಸು ಕೆದಕಿದಂತಾಗುತ್ತದೆ ಎಂದು ವ್ಯಂಗ್ಯವಾಡಿದರು.

ಶಾಸಕ ಮುನಿರತ್ನ ವಿರುದ್ಧದ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಲೋಕಾಯುಕ್ತ ಎಸ್‌ಪಿ ಡಾ.ಬಿ.ಎ. ಮಹೇಶ್ ಅವರ ವರ್ಗಾವಣೆ ಮಾಡುವ ಮೂಲಕ ಭ್ರಷ್ಟರ ರಕ್ಷಣೆಗೆ ಸಿದ್ದರಾಮಯ್ಯನವರ ಸರ್ಕಾರ ಮುಂದಾಗಿದೆ. ಇದನ್ನೆಲ್ಲಾ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ, ಬೇರೊಂದು ಇಲಾಖೆಗೆ ವರ್ಗಾಯಿಸುವ ಬದಲು ಅವರಿದ್ದ ಸ್ಥಾನವನ್ನೇ ಮೇಲ್ದರ್ಜೆಗೆ ಏರಿಸಿ, ಅಲ್ಲಿಯೇ ಮುಂದುವರಿಸಲಬಹುದಿತ್ತು. ಶುದ್ಧ ಆಡಳಿತದ ಭರವಸೆ ನೀಡಿದ್ದ ಸಿಎಂ, ಪಕ್ಷದ ಶಾಸಕ ಮಣಿರತ್ನ, ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧವಾದರೂ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು.

ಬೀದಿಯಲ್ಲೇ ಕುರ್ಚಿ ಹಾಕಿ ಪಕ್ಷ ಕಟ್ಟುತ್ತೇನೆ
ಈಗಿರುವ ಪಕ್ಷದ ಕಚೇರಿ ಬಗ್ಗೆ ಯಾವುದೇ ವ್ಯಾಮೋಹವೂ ಇಲ್ಲ. ಕಾಂಗ್ರೆಸ್‌ಗೆ ಬಿಡುವ ಬಗ್ಗೆ ಯಾವುದೇ ಗೊಂದಲವೂ ಇಲ್ಲ. ಆದರೆ, ಉಳಿದೆರಡು ರಾಜಕೀಯ ಪಕ್ಷಗಳಿಗೆ ಸರ್ಕಾರ ಜಾಗ ನೀಡಿದ್ದು, ಸುಸಜ್ಜಿತ ಕಟ್ಟಡದಲ್ಲಿ ಕಚೇರಿ ನಡೆಸುತ್ತಿದ್ದಾರೆ. ಹಾಗೆಯೇ ನಮ್ಮ ಪಕ್ಷಕ್ಕೂ ಸರ್ಕಾರ ಜಾಗ ನೀಡಲಿ ಎಂದು ಆಗ್ರಹಿಸಿದರು. ಪಕ್ಷದ ಕಚೇರಿಗೆ ಸರ್ಕಾರ ಜಾಗ ನೀಡಿದರೆ ಸಂತೋಷ. ಇಲ್ಲವಾದಲ್ಲಿ ಬೀದಿಯಲ್ಲಿಯೇ ಕುರ್ಚಿ ಹಾಕಿಕೊಂಡು ಪಕ್ಷ ಕಟ್ಟುತ್ತೇನೆ. ಪಕ್ಷದ ಕಚೇರಿಗಾಗಿ ಖಾಸಗಿ ಕಟ್ಟಡವನ್ನು ಬಾಡಿಗೆ ಪಡೆಯಲು ಯತ್ನಿಸಲಾಗುತ್ತಿದೆ ಎಂದರು.

ಜ.24ರಂದು ಸದಸ್ಯತ್ವ ಅಭಿಯಾನ ಆರಂಭ
24ರಂದು ಅರಮನೆ ಮೈದಾನದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಆರಂಭಿಸಲಿದ್ದು, ಲಕ್ಷಾಂತರ ಜನರು ಸದಸ್ಯತ್ವ ಪಡೆಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT