ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ತಪ್ಪಿದ್ದರೆ ಧ್ವನಿಯೆತ್ತಬಹುದಿತ್ತು: ವೆಂಕಯ್ಯನಾಯ್ಡು

ಎಂಎಸ್‌ಜಿ ಚಿತ್ರಕ್ಕೆ ಸರ್ಕಾರ ಅನುಮತಿ ನೀಡಿರುವುದರಲ್ಲಿ ತಪ್ಪು ನಿರ್ಧಾರ ಕೈಗೊಂಡಿದ್ದರೆ ನಿರ್ಧಾರದ...

ಚೆನ್ನೈ: ಚಿತ್ರಕ್ಕೆ ಅನುಮತಿ ನೀಡುವುದರಲ್ಲಿ ಸರ್ಕಾರ ಅನುಮತಿ ನೀಡುವುದರಲ್ಲಿ ತಪ್ಪು ನಿರ್ಧಾರ ಕೈಗೊಂಡಿದ್ದರೆ ನಿರ್ಧಾರದ ವಿರುದ್ಧ ಸೆನ್ಸಾರ್ ಮಂಡಳಿ ಅಧಿಕಾರಿಗಳು ಧ್ವನಿಯೆತ್ತಬಹುದಿತ್ತು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.

'ಮೆಸೆಂಜರ್ ಆಫ್ ಗಾಡ್‌' (ಎಂಎಸ್‌ಜಿ) ಚಿತ್ರ ಬಿಡಗಡೆಗೆ ಮೇಲ್ಮನವಿ ಪ್ರಾಧಿಕಾರ ಹಸಿರು ನಿಶಾನೆ ತೋರಿದ್ದಕ್ಕೆ ಅಸಮಾಧಾನಗೊಂಡು ಸೆನ್ಸಾರ್ ಮಂಡಳಿಯ ಸದಸ್ಯರು ರಾಜಿನಾಮೆ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿರುವ ವೆಂಕಯ್ಯ ನಾಯ್ಡು ಅವರು, ಸೆನ್ಸಾರ್ ಮಂಡಳಿಯ ಅಧಿಕಾರಿಗಳು ರಾಜಿನಾಮೆ ನೀಡುವುದರ ಬದಲು ತಪ್ಪಿದ್ದರೆ ತಮ್ಮ ಅಧಿಕಾರವನ್ನು ಬಳಸಿಕೊಂಡು ಆದರ ವಿರುದ್ಧ ಧ್ವನಿ ಎತ್ತಬಹುದಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ.

ಯುಪಿಎ ಸರ್ಕಾರದ ಅವಧಿಯಲ್ಲಿ ಸೆನ್ಸಾರ್ ಮಂಡಳಿಯ ಸದಸ್ಯರನ್ನು ನೇಮಕ ಮಾಡಲಾಗಿದ್ದು, ಪ್ರಸ್ತುತ ಬಿಜೆಪಿ ಸರ್ಕಾರವನ್ನು ದೂಷಿಸುವುದು ಸರಿಯಲ್ಲ ಎಂದು ನಾಯ್ಡು ಹೇಳಿದ್ದಾರೆ.

ಕೇಂದ್ರೀಯ ಸೆನ್ಸಾರ್ ಮಂಡಳಿಯ ಸಭೆಯಲ್ಲಿ ವಿವಾದಿತ ಎಂಎಸ್‌ಜಿ ಚಿತ್ರಕ್ಕೆ ಯಾವುದೇ ರೇಟಿಂಗ್ಸ್ ನೀಡದೇ ಇರಲು ನಿರ್ಧರಿಸಲಾಗಿತ್ತು. ಹೀಗಾಗಿ ಸಿನಿಮಾ ಬಿಡುಗಡೆ ವಿಚಾರವು  ಚಲನಚಿತ್ರ ಪ್ರಮಾಣೀಕರಣ ಮೇಲ್ಮನವಿ ಪ್ರಾಧಿಕಾರ (ಎಫ್‌ಸಿಎಟಿ)ರ ಮೆಟ್ಟಿಲೇರಿತ್ತು. ಅಲ್ಲದೆ ಗುರುವಾರ ತಡರಾತ್ರಿ ಪ್ರಾಧಿಕಾರ ಸಿನಿಮಾ ಬಿಡುಗಡೆಗೆ ಒಪ್ಪಿಗೆ ನೀಡಿತ್ತು. ಇದರಿಂದ ಅಸಮಾಧಾನಗೊಂಡ ಸೆನ್ಸಾರ್ ಮಂಡಳಿಯ ಅಧ್ಯಕ್ಷೆ ಲೀಲಾ ಸ್ಯಾಮ್ಸನ್ ಸೇರಿದಂತೆ 9 ಮಂದಿ ಸೆನ್ಸಾರ್ ಮಂಡಳಿ ಸದಸ್ಯರು ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಷ್ಯಾ ಸೇನೆ ಸೇರಲು ಒತ್ತಾಯ: ಉಕ್ರೇನ್ ನಿಂದ SOS ವಿಡಿಯೋ ಕಳಿಸಿದ ಗುಜರಾತ್ ವಿದ್ಯಾರ್ಥಿ!

ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆ: ಆರೋಪ ಸರಿಯಲ್ಲ, ವಿಯನ್ನಾ ಒಪ್ಪಂದಕ್ಕೆ ಬದ್ಧ; ಬಾಂಗ್ಲಾದೇಶಕ್ಕೆ ಭಾರತ ತಿರುಗೇಟು

ನೈಋತ್ಯ ರೈಲ್ವೆಯ 89% ಹಳಿಗಳು ವಿದ್ಯುದೀಕರಣ; ಬೆಂಗಳೂರು ವಿಭಾಗದಲ್ಲಿ 99% ಪೂರ್ಣ

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ: ಖರ್ಗೆ ಹೇಳಿಕೆ ಬೆಂಬಲಿಸಿದ ಎಂ.ಬಿ ಪಾಟೀಲ; ಡಿಕೆಶಿಗೆ ಪರೋಕ್ಷ ಟಾಂಗ್

Myths Vs Reality: ಭಾರತದ ಬಗ್ಗೆ ಆರು 'ತಪ್ಪು ಕಲ್ಪನೆ'ಗಳನ್ನು ಬಗೆಹರಿಸಿದ ರಷ್ಯಾದ ಮಹಿಳೆ! Video

SCROLL FOR NEXT