ಭದ್ರತಾ ಪಡೆ 
ದೇಶ

ಯೋಧರ ಗುಂಡೇಟಿಗೆ ಜೆಎಂನ ಇಬ್ಬರು ಉಗ್ರರು ಬಲಿ

ಶ್ರೀನಗರ: ಉತ್ತರ ಕಾಶ್ಮೀರದ ಸೋಪೋರ್‌ನಲ್ಲಿ ಇಂದು ಬೆಳಿಗ್ಗೆ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.

ಸೋಪುರ ಪ್ರದೇಶದಲ್ಲಿ ಜೆಎಂ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯೋಧರು ಇಡೀ ಪ್ರದೇಶವನ್ನು ಸುತ್ತುವರಿದರು. ಈ ಸಂದರ್ಭ ಉಗ್ರರು ಸೇನಾ ಪಡೆ ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. 

ನಿರಂತರ  ಗುಂಡಿನ ಕಾಳಗದ ನಂತರ ಇಬ್ಬರು ಉಗ್ರರು ಬಿಎಸ್‌ಎಫ್ ಗುಂಡಿಗೆ ಬಲಿಯಾದರು. ಸೋಪುರ್ ಜಿಲ್ಲೆಯ ಸೈದಾಪುರವನ್ನು ಸುತ್ತುವರಿದಿರುವ ಸೇನಾ ಪಡೆ ಇನ್ನೂ ಯಾರಾದರೂ ಉಗ್ರರಿರಬಹುದೇ ಎಂದು ಶೋಧಿಸುತ್ತಿದ್ದಾರೆ. ಉಗ್ರರಿಬ್ಬರು ಅಡಗಿದ್ದ ಮನೆಯನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗಿದೆ. ಇತ್ತೀಚೆಗೆ ಗಡಿ ಭಾಗದಲ್ಲಿ ಉಗ್ರರ ಒಳನುಸುಳುವಿಕೆ ಹೆಚ್ಚುತ್ತಿದ್ದು, ಸಮೀಪದ ಹಳ್ಳಿಗಳ ನಿವಾಸಿಗಳು ಆತಂಕಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT