ರಾಜಧಾನಿ ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವ ಸಂಭ್ರಮ (ಸಾಂದರ್ಭಿಕ ಚಿತ್ರ) 
ದೇಶ

ರಾಜಪಥದ ಮೇಲೆ ವಿಮಾನ ಹಾರಾಟ ನಿಷೇಧಕ್ಕೆ "ದೊಡ್ಡಣ್ಣ" ಷರತ್ತು

ಗಣರಾಜ್ಯೋತ್ಸವ ದಿನಾಚರಣೆಯಂದು ರಾಜಪಥದ ಸುತ್ತಮುತ್ತಲಿನ ಪ್ರದೇಶವನ್ನು "ವಿಮಾನ ಹಾರಾಟ ನಿಷಿದ್ಧ...

ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಯಂದು ರಾಜಪಥದ ಸುತ್ತಮುತ್ತಲಿನ ಪ್ರದೇಶವನ್ನು "ವಿಮಾನ ಹಾರಾಟ ನಿಷಿದ್ಧ ವಲಯ"ವೆಂದು ಘೋಷಿಸಬೇಕು ಅಮೆರಿಕ ಭಾರತವನ್ನು ಒತ್ತಾಯಿಸಿದೆ.

ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸದಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಆಗಮಿಸುವ ಹಿನ್ನಲೆಯಲ್ಲಿ ಅಂದು ರಾಜಪಥದ ಸುತ್ತಮುತ್ತ ವಿಮಾನ ಹಾರಾಟವನ್ನು ನಿಷೇಧಿಸಬೇಕು. ರಕ್ಷಣಾ ದೃಷ್ಟಿಯಿಂದ ಈ ಕ್ರಮ ಅತ್ಯಗತ್ಯ ಎಂದು ಅಮೆರಿಕ ಭಾರತವನ್ನು ಒತ್ತಾಯಿಸಿದೆ. ಆದರೆ ಅಮೆರಿಕದ ಪ್ರಸ್ತಾಪವನ್ನು ಭಾರತ ತಿರಸ್ಕರಿಸಿದ್ದು, ಅಧ್ಯಕ್ಷರ ಭದ್ರತೆ ಕುರಿತಂತೆ ಎಲ್ಲ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಮೆರಿಕದ ಭದ್ರತಾ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದೆ.

ಮೂಲಗಳ ಪ್ರಕಾರ ಬರಾಕ್ ಒಬಾಮ ಅವರ ಭಾರತ ಭೇಟಿ ಕುರಿತಂತೆ ಶ್ವೇತಭವನ ಭಾರತಕ್ಕೆ ಹಲವು ಷರತ್ತುಗಳನ್ನು ವಿಧಿಸಿದ್ದು, ಬಹುತೇಕ ಷರತ್ತುಗಳು ಒಬಾಮ ಅವರ ಭದ್ರತೆ ಕುರಿತ ಷರತ್ತುಗಳಾಗಿವೆ ಎಂದು ಹೇಳಲಾಗುತ್ತಿದೆ. ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಮುಖ್ಯ ಅತಿಥಿಗಳು ರಾಷ್ಟ್ರಪತಿಗಳೊಂದಿಗೆ ಕಾರಿನಲ್ಲಿ ರಾಜಪಥಕ್ಕೆ ಆಗಮಿಸುವುದು ಸಂಪ್ರದಾಯವಾದರೂ, ಇದಕ್ಕೆ ಶ್ವೇತಭವನ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕ ಅಧ್ಯಕ್ಷರ ಭದ್ರತೆಗೆ ಸಂಬಂಧಿಸಿದ ಕಾನೂನುಗಳು ಇದಕ್ಕೆ ಅನುವು ಮಾಡಿಕೊಡುವುದಿಲ್ಲ. ಹೀಗಾಗಿ ಒಬಾಮ ಅವರು ತಮ್ಮದೇ ಕಾರಿನಲ್ಲಿ ಆಗಮಿಸುತ್ತಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಗಣರಾಜ್ಯೋತ್ಸವ ದಿನದಂದು ಭಾರತದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಒಬಾಮ ಅವರೊಂದಿಗೆ ಒಂದೇ ಕಾರಿನಲ್ಲಿ ರಾಜಪಥಕ್ಕೆ ಆಗಮಿಸುವ ಬದಲು ಬೇರೆ ಬೇರೆ ವಾಹನಗಳಲ್ಲಿ ಆಗಮಿಸಬಹುದು ಎಂದು ಅಮೆರಿಕ ಅಧಿಕಾರಿಗಳು ಭಾರತಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದೇ ಜನವರಿ 25ರಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಭಾರತಕ್ಕೆ ಆಗಮಿಸಲಿದ್ದು, ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲ್ಲಿದ್ದಾರೆ. ಜನವರಿ 27ರವರೆಗೂ ಭಾರತದಲ್ಲಿರುವ ಒಬಾಮ ಅವರು 27ರ ಸಂಜೆ ಅಮೆರಿಕದತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT