ಸಾಂದರ್ಭಿಕ ಚಿತ್ರ 
ದೇಶ

ದಾಖಲೆಯಿಲ್ಲದೆ ಚಿನ್ನ ಸಾಗಣೆ: ಇಬ್ಬರ ಸೆರೆ

ಸೂಕ್ತ ದಾಖಲೆಗಳಿಲ್ಲದೇ ಮುಂಬೈನಿಂದ ಬೆಂಗಳೂರಿಗೆ ಚಿನ್ನಾಭರಣ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ...

ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೇ ಮುಂಬೈನಿಂದ ಬೆಂಗಳೂರಿಗೆ ಚಿನ್ನಾಭರಣ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 1.25 ಕೋಟಿ ಮೌಲ್ಯದ 4.5 ಕೆ.ಜಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ರಾಜಸ್ಥಾನ ಮೂಲದ ಶೈಲೇಶ್ (30) ಗೋಕುಲ್‌ರಾಮ್ (30) ಬಂಧಿತರು. ಆರೋಪಿಗಳು ಸಾಗಿಸುತ್ತಿದ್ದ 4.5 ಕೆ.ಜಿ ಚಿನ್ನಾಭರಣ ಪೈಕಿ 2.2 ಕೆ.ಜಿ ಒಡವೆಗೆ ಮಾತ್ರ ರಸೀದಿ ಹೊಂದಿದ್ದಾರೆ. ಉಳಿದ 2.3 ಕೆ.ಜಿ ಚಿನ್ನಾಭರಣವನ್ನು ದಾಖಲೆ ಇಲ್ಲದೇ ಸಾಗಿಸುತ್ತಿದ್ದರು.

ಚಿಕ್ಕಪೇಟೆಯಲ್ಲಿ ವಾಸವಿರುವ ಆರೋಪಿಗಳು, ನಗರದ ಚಿನ್ನದ ವ್ಯಾಪಾರಿಗಳಿಂದ ಆರ್ಡರ್ ತೆಗೆದುಕೊಂಡು ಮುಂಬೈನಲ್ಲಿ ಒಡವೆ ವಿನ್ಯಾಸ ಮಾಡಿಸಿಕೊಟ್ಟು, ಕಮಿಷನ್ ಪಡೆಯುತ್ತಿದ್ದರು. ತೆರಿಗೆ ವಂಚಿಸುವ ಉದ್ದೇಶದಿಂದ ಕೆಲವು ಆಭರಣಗಳಿಗೆ ಮಾತ್ರ ರಶೀದಿ ಮಾಡಿಸಿ ಉಳಿದ ಆಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಪರಾಧಿಗಳಿಂದ ಪಡೆದ ಚಿನ್ನಾಭರಣವನ್ನೂ ಈ ರೀತಿ ಅಕ್ರಮವಾಗಿ ಸಾಗಿಸಲಾಗುತ್ತದೆ. ಈ ಇಬ್ಬರ ಆಗಮನದ ಬಗ್ಗೆ ಮೊದಲೇ ಮಾಹಿತಿ ಇತ್ತು. ಶನಿವಾರ ಬೆಳಗ್ಗೆ ಮುಂಬೈನಿಂದ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ಕಾರಲ್ಲಿ ಚಿಕ್ಕಪೇಟೆಗೆ ತೆರಳುತ್ತಿದ್ದಾಗ ರಾಜಭವನ ರಸ್ತೆಯಲ್ಲಿ ದಾಳಿ ನಡೆಸಿ ಬಂಧಿಸಲಾಯಿತು. 17 ಚಿನ್ನದ ವ್ಯಾಪಾರಿಗಳು ಸೇರಿ 19 ಜನರ ವಿರುದ್ಧ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT