ಹೊತ್ತು ಉರಿದ ಗ್ರಾಮ 
ದೇಶ

ಬಿಹಾರದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಮೂವರು ಬಲಿ

ಅನ್ಯ ಕೋಮುಗಳ ಪ್ರೀತಿಯ ಕಾಡ್ಗಿಚ್ಚು ಒಂದು ಗ್ರಾಮವನ್ನೇ ಸುಟ್ಟು ಹಾಕಿದ್ದಲ್ಲದೆ ಮೂವರ ಸಾವಿಗೆ ಕಾರಣವಾಗಿದೆ. ಬಿಹಾರದ ಮುಜಫ್ಫರ್‌ಪುರ ಜಿಲ್ಲೆಯ ಸರಯ್ಯಾ ಗ್ರಾಮದಲ್ಲಿ ಅನ್ಯ ಕೋಮುಗಳ...

ಮುಜಫ್ಫರ್‌ಪುರ: ಅನ್ಯ ಕೋಮುಗಳ ಪ್ರೀತಿಯ ಕಾಡ್ಗಿಚ್ಚು ಒಂದು ಗ್ರಾಮವನ್ನೇ ಸುಟ್ಟು ಹಾಕಿದ್ದಲ್ಲದೆ ಮೂವರ ಸಾವಿಗೆ ಕಾರಣವಾಗಿದೆ.

ಬಿಹಾರದ ಮುಜಫ್ಫರ್‌ಪುರ ಜಿಲ್ಲೆಯ ಸರಯ್ಯಾ ಗ್ರಾಮದಲ್ಲಿ ಅನ್ಯ ಕೋಮುಗಳ ಪ್ರೀತಿಯ ಕಿಚ್ಚಿಗೆ ಮೂವರು ಸಜೀವವಾಗಿ ದಹನವಾಗಿದ್ದು, ಮತ್ತಿಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಈ ಸಂಬಂಧ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಯುವಕನ ಅಪಹರಣವಾಗಿತ್ತು. ಆ ಯುವಕನ ಶವ ನಿನ್ನೆ ಯುವತಿಯ ತಂದೆಯ ಜಮೀನಿನಲ್ಲಿ ಪತ್ತೆಯಾಗಿದ್ದರಿಂದ ಹುಡುಗಿಯ ಕಡೆಯವರೆ ಯುವಕನನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಬಹುಸಂಖ್ಯಾತ ಕೋಮಿನ ಒಂದು ಗುಂಪು, ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಗ್ರಾಮಕ್ಕೆ ನುಗ್ಗಿ 40ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಬೆಂಕಿಗೆ ಮೂವರು ಸಜೀವ ದಹನವಾಗಿತ್ತು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನ್ಯ ಕೋಮಿನ ಯುವಕನನ್ನು ತಮ್ಮ ಮಗಳು ಪ್ರೀತಿಸುತ್ತಿರುವುದಕ್ಕೆ ಹುಡುಗಿಯ ತಂದೆ ವಿರೋಧ ವ್ಯಕ್ತಪಡಿಸಿದ್ದರು. ನಂತರ ಯುವಕ ಅಪಹರಣವಾಗಿ ಆತನ ಶವ ಹುಡುಗಿಯ ತಂದೆಯ ಜಮೀನಿನಲ್ಲಿ ಪತ್ತೆಯಾಗಿದ್ದರಿಂದ ಹಿಂಸಾಚಾರ ಭುಗಿಲೆದಿದ್ದೆ. ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ತಂದೆಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಕಿಯ ಕಾಡ್ಗಿಚ್ಚಿಗೆ ಬಲಿಯಾದವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಬಿಹಾರ ಸರ್ಕಾರ ಘೋಷಿಸಿದೆ. ಸದ್ಯ ಸರಯ್ಯಾ ಗ್ರಾಮದಲ್ಲಿ ಪರಿಸ್ಥಿತಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT