ಜಯಲಲಿತಾ 
ದೇಶ

ಜಯಾ ಕೇಸ್‌ಗೆ ಭವಾನಿ: ಸುಪ್ರೀಂ ಸಲಹೆ ಪಡೆಯಲು ಸೂಚನೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ...

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿಯಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ವಕೀಲ(ಎಸ್‌ಪಿಪಿ) ಭವಾನಿ ಸಿಂಗ್ ಅವರ ಮುಂದುವರಿಕೆ ಕುರಿತು ತಕರಾರಿದ್ದರೆ, ಸುಪ್ರೀಂಕೋರ್ಟ್‌ನಿಂದ ಸ್ಪಷ್ಟೀಕರಣ ಪಡೆಯುವಂತೆ ಸೂಚಿಸಿ ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆನಂದ್ ಭೈರಾರೆಡ್ಡಿ ಅವರ ಏಕಸದಸ್ಯ ಪೀಠ, ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ರಾಜ್ಯ ಹೈಕೋರ್ಟ್ ಮೇಲ್ಮನವಿ ಅರ್ಜಿ ವಿಚಾರಣೆಗೆ ವಿಶೇಷ ಪೀಠ ರಚಿಸಿ ವಿಚಾರಣೆ ನಡೆಸುತ್ತಿದೆ. ಮೇಲ್ಮನವಿ ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್, ರಾಜ್ಯ ಹೈಕೋರ್ಟ್‌ಗೆ ನಿರ್ದಿಷ್ಟ ಕಾಲಾವಕಾಶ ನೀಡಿದ್ದು ಅರ್ಜಿ ವಿಲೇವಾರಿ ಮಾಡುವಂತೆ ನಿರ್ದೇಶಿಸಿದೆ.

ಆದ್ದರಿಂದ ಈ ನ್ಯಾಯಪೀಠ ಈ ಹಂತದಲ್ಲಿ ಮಧ್ಯೆ ಪ್ರವೇಶಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟು ಅಂರ್ಜಿ ಇತ್ಯರ್ಥಪಡಿಸಿದೆ.

ತಮಿಳುನಾಡಿನ ವಿಚಕ್ಷಣಾ ದಳ ಮತ್ತು ಭ್ರಷ್ಟಾಚಾರ ನಿಗ್ರಹ ದಳದ (ಡಿವಿಎಸಿ) ಪರವಾಗಿ ಎಸ್‌ಪಿಪಿ ಭವಾನಿ ಸಿಂಗ್ ಅವರ ಮುಂದುವರಿಕೆಯನ್ನು ಆಕ್ಷೇಪಿಸಿ ಡಿಎಂಕೆ ನಾಯಕ ಅನ್ಬಳಗನ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಎಸ್‌ಪಿಪಿ ಅಪರಾಧಿಗಳಿಗೆ ಜಾಮೀನು ನೀಡಲು ತಮ್ಮದೇನೂ ಆಕ್ಷೇಪವಿಲ್ಲ ಎಂದುಹೇಳಿಕೆ ನೀಡುವ ಮೂಲಕ ಅನುಮಾನಸ್ಪದವಾಗಿ ನಡೆದಿಕೊಂಡಿದ್ದರು. ಹೀಗಿದ್ದಾಗ ಅವರನ್ನು ಮುಂದುವರಿಸುವುದು ನ್ಯಾಯಸಮ್ಮತವಲ್ಲ ಎಂದೂ ವಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT