ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ 
ದೇಶ

ಕಲ್ಲಿದ್ದಲು: ಸಿಂಗ್ ವಿಚಾರಣೆ ಕುರಿತ ಸ್ಪಷ್ಟನೆ ನೀಡಿದ ಕೈ

ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್...

ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ಬುಧವಾರ ಕಾಂಗ್ರೆಸ್ ಹೇಳಿದೆ.

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಅವರು, ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮನಮೋಹನ್ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಿದ್ದರು. ಓರ್ವ ಜವಾಬ್ದಾರಿಯುತ ಪ್ರಜೆಯಾಗಿ ವಿಚಾರಣೆಗೆ ಸಹಕರಿಸುವುದು ಅವರ ಕರ್ತವ್ಯ. ಡಾ.ಸಿಂಗ್ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದು, ತನಿಖೆಗೆ ಸಹಕರಿಸಿದ ಅವರ ಗುಣ ಪ್ರಶಂಸಾರ್ಹ ಎಂದು ಹೇಳಿದರು..

ಹಿಂಡಾಲ್ಕೋ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಜ.27ರೊಳಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಡಿ.16ರಂದು ವಿಶೇಷ ನ್ಯಾಯಾಲಯ ಸಿಬಿಐಗೆ ಸೂಚಿಸಿತ್ತು. ಅದರಂತೆ ವಿಚಾರಣೆ ಕೈಗೊಂಡಿದ್ದ ಸಿಬಿಐನ ಅಧಿಕಾರಿಗಳು ಎರಡು ದಿನಗಳ ಹಿಂದೆಯೇ ಸಿಂಗ್ ನಿವಾಸಕ್ಕೆ ತೆರಳಿ ಅವರನ್ನು ವಿಚಾರಣೆಗೊಳಪಡಿಸಿದ್ದರು. ಈ ವಿಚಾರದ ಕುರಿತಾದ ಮಾಹಿತಿಯನ್ನು ಹೊರಹಾಕಲು ಸಿಬಿಐ ನಿರಾಕರಿಸಿತ್ತು. ಅಲ್ಲದೆ, ಸಿಂಗ್ ಅವರ ಆಪ್ತರೊಬ್ಬರು ವಿಚಾರಣೆ ನಡೆದೇ ಇಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT