ಹಣಕಾಸು ಸಚಿವ ಅರುಣ್‌ಜೇಟ್ಲಿ 
ದೇಶ

ಮಹತ್ವದ ನಿರ್ಧಾರಗಳ ಅನುಷ್ಠಾನ: ಜೇಟ್ಲಿ

ವಿದೇಶಿ ಬಂಡವಾಳ ಹೂಡಿಕೆ, ಅರ್ಥವ್ಯವಸ್ಥೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ...

ದಾವೋಸ್: ವಿದೇಶಿ ಬಂಡವಾಳ ಹೂಡಿಕೆ, ಅರ್ಥವ್ಯವಸ್ಥೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು, ನೀತಿ ನಿರೂಪಣೆಯಲ್ಲಿ ಹೊಸ ಉಪಕ್ರಮಗಳನ್ನು ಜಾರಿಗೆ ತಂದಿದೆ. ಹಾಗಾಗಿ ಮುಂದಿನ ತಿಂಗಳು ಮಂಡನೆಯಾಗಲಿರುವ ಬಜೆಟ್ ಘೋಷಣೆಗಿಂತಲೂ ಈ ಕ್ರಮಗಳು ಹೆಚ್ಚು ಮಹತ್ವದ್ದು ಎಂದು ಹಣಕಾಸು ಸಚಿವ ಅರುಣ್‌ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.

ಬಜೆಟ್ ನಮ್ಮ ಸರ್ಕಾರದ ಪಾಲಿಗೆ ಮಹತ್ವದ ಗಳಿಗೆ. ಅದೇ ರೀತಿ ಮುಂದಿನ 364 ದಿನಗಳೂ ಸರ್ಕಾರದ ಪಾಲಿಗೆ ಅಷ್ಟೇ ಮುಖ್ಯ. ಈ ರೀತಿ ಹೇಳು ಮೂಲಕ ನಾನು ಬಜೆಟ್ ಬಗ್ಗೆ ಜನ ಇಟ್ಟುಕೊಂಡಿರುವ ನಿರೀಕ್ಷೆಗಳನ್ನು ಹುಸಿ ಮಾಡುತ್ತಿಲ್ಲ.

 ರೈಲ್ವೆ, ರಕ್ಷಣಾ ಕ್ಷೇತ್ರಗಳನ್ನು ವಿದೇಶಿ ಬಂಡವಾಳ ಹೂಡಿಕೆಗೆ ತೆರೆಯುವಂತೆ ಮಾಡುವುದು ಸಣ್ಣ ಮಾತಲ್ಲ, ಜಿಎಸ್‌ಟಿ ಅನುಷ್ಠಾನಕ್ಕೆ ಮುಂದಾಗುವುದು, ಅದಿರು ಕ್ಷೇತ್ರ, ನೈಸರ್ಗಿಕ ಸಂಪನ್ಮೂಲಗಳ ಹಂಚಿಕೆಗೆ ಸಂಬಂಧಿಸಿ ತೆಗೆದುಕೊಂಡ ಉಪಕ್ರಮಗಳು ಸಾಮಾನ್ಯವಾದುದೇನಲ್ಲ. ನಮ್ಮ ಹಿಂದಿನ ಸರ್ಕಾರಗಳು ಈ ವಿಚಾರದಲ್ಲಿ ವಿಫಲವಾಗಿತ್ತು. ಆದರೆ, ನಾವು ದೇಶದ ಆರ್ಥಿಕ ಬೆಳವಣಿಗೆಯ ದೃಷ್ಠಿಯಿಂದ ಇದನ್ನೆಲ್ಲ ಬಜೆಟ್‌ಗೆ ಮೊದಲೇ ಮಾಡಿ ತೋರಿಸಿದ್ದೇವೆ ಎಂದಿದ್ದಾರೆ ಜೇಟ್ಲಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT