ಬಂಧಿತ ಆರೋಪಿಗಳು 
ದೇಶ

ಕ್ರಿಕೆಟ್ ಕೊಲೆ: ಆರೋಪಿಗಳ ಬಂಧನ

ಬನ್ನೇರುಘಟ್ಟ ರಸ್ತೆ ಬಸವನಪುರ ವೀವರ್ಸ್ ಕಾಲೋನಿಯಲ್ಲಿ ಕಳೆದ ಭಾನುವಾರ ಕ್ರಿಕೆಟ್ ಆಡುವ ವೇಳೆ...

ಬೆಂಗಳೂರು: ಬನ್ನೇರುಘಟ್ಟ ರಸ್ತೆ ಬಸವನಪುರ ವೀವರ್ಸ್ ಕಾಲೋನಿಯಲ್ಲಿ ಕಳೆದ ಭಾನುವಾರ ಕ್ರಿಕೆಟ್ ಆಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಕೊಲೆ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆಯ

ಜೆ.ಪಿ.ನಗರ 8ನೇ ಹಂತ ನಿವಾಸಿಗಳಾದ ವೇಲು (20), ವೈ.ಆರ್.ಎಸ್.ಕಣ್ಣನ್ (20), ಸಂತೋಷ್ (19), ಬನ್ನೇರುಘಟ್ಟ ಸಮೀಪದ ಬಿಲ್ಲವರದಹಳ್ಳಿ ನಿವಾಸಿಗಳಾದ ವಿನೋದ್(19), ಹಾಗೂ ಮಂಜುನಾಥ(22) ಬಂಧಿತರು. ಕಳೆದ ಭಾನುವಾರ (ಜ.18) ವೀವರ್ಸ್ ಕಾಲೋನಿ ಆಟದ ಮೈದಾನದಲ್ಲಿ ಕಲ್ಕೆರೆ ನಿವಾಸಿ ರಾಜೇಶ್ ಅಲಿಯಾಸ್ ಗುಂಡ(24) ಎಂಬಾತನ ಕೊಲೆಯಾಗಿತ್ತು. ಘಟನೆಯಲ್ಲಿ ಶಿವು ಹಾಗೂ ಬಾಲಾಜಿ ಎಂಬುವರಿಗೆ ಇರಿತದ ಗಾಯಗಳಾಗಿದ್ದವು. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೋ ಬಾಲ್‌ನಿಂದ ಕೊಲೆ

ನಗರದ ಹಲವೆಡೆ ಕೆಲಸ ಮಾಡುವ ಬಿಲ್ಲವರದಹಳ್ಳಿ ಹಾಗೂ ಕಲ್ಕೆರೆ ಗ್ರಾಮದ ಯುವಕರು ಭಾನುವಾರ ಮಧ್ಯಾಹ್ನ ಕ್ರಿಕೆಟ್ ಆಡಲು ಬಂದಿದ್ದರು. ಎರಡು ಗ್ರಾಮಗಳ ನಡುವೆ ಪಂದ್ಯ ನಡೆಯುತ್ತಿದ್ದ ವೇಳೆ ಬಿಲ್ಲವರದಹಳ್ಳಿ ಗ್ರಾಮದ ವಿನೋದ್ ಬೌಲಿಂಗ್ ಮಾಡುತ್ತಿದ್ದ. ಈ ವೇಳೆ ಕಲ್ಕೆರೆ ಗ್ರಾಮದ ಯುವಕರು ಬ್ಯಾಟಿಂಗ್ ಮಾಡುತ್ತಿದ್ದದರು. ಅದೇ ಗ್ರಾಮದ ಯುವಕನೇ ಅಂಪೈರಿಂಗ್ ಮಾಡುತ್ತಿದ್ದ.

ವಿನೋದ್ ನೋಬಾಲ್ ಎಸೆದಿದ್ದರಿಂದ, ಅಂಪೈರ್ ನೋ ಬಾಲ್ ಎಂದು ಹೇಳಿದ್ದ. ಆದರೆ, ಅದಕ್ಕೋಪ್ಪದ ವಿನೋದ್ ಹಾಗೂ ಆತನ ತಂಡ ಬಾಲ್ ಸರಿಯಾಗಿದೆ ಎಂದು ವಾದ ಮಾಡಿದ್ದರು. ಇದರೊಂದಿಗೆ ಎರಡು ತಂಡಗಳ ನಡುವೆ ಜಗಳ ಆರಂಭವಾಗಿ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಬೌಲಿಂಗ್ ಮಾಡುತ್ತಿದ್ದ ವಿನೋದ್ ಹಾಗೂ ತಂಡ, ಕಲ್ಲೆಕೆರೆಯ ರಾಜೇಶನಿಗೆ ಚಾಕುವಿನಿಂದ ಇರಿದಿದ್ದರು. ಬಿಡಿಸಲು ಬಂದ ಶಿವು ಹಾಗೂ ಬಾಲಾಜಿಗೂ ಇರಿದು ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡ ಹುಳಿಮಾವು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT