ಬಾಲ ಕಾರ್ಮಿಕ(ಸಾಂದರ್ಭಿಕ ಚಿತ್ರ) 
ದೇಶ

ಹೈದರಬಾದ್‌ನಲ್ಲಿ 250 ಬಾಲಕಾರ್ಮಿಕರ ರಕ್ಷಣೆ!

ಹೈದರಬಾದ್: ತೀಕ್ಷ್ಣಗತಿಯಲ್ಲಿ ಕಾರ್ಯಾಚರಣೆ ನಡೆಸಿದ ಹೈದರಬಾದ್ ದಕ್ಷಿಣ ವಲಯ ನಗರ ಪೊಲೀಸರು ಒಟ್ಟು 250 ಬಿಹಾರ ಮತ್ತು ಉತ್ತರಪ್ರದೇಶ ಮೂಲದ ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಹೈದರಬಾದ್‌ನ ತಲಬ್‌ಕಟ್ಟ, ಹುಸೈನಿಯಲಂ ಭವಾನಿ ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸುಮಾರು 500 ಮಂದಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದರು. ಹೆತ್ತವರಿಗೆ ಒಂದಷ್ಟು ಹಣ ನೀಡಿ ಮಕ್ಕಳನ್ನು ಖರೀದಿಸಿ ತಂದು ಕೆಲಸಕ್ಕಿಟ್ಟುಕೊಂಡು ದುಡಿಸಿಕೊಳ್ಳುತ್ತಿದ್ದವರಲ್ಲಿ ಪ್ರಮುಖನಾಗಿರುವ ದೇಹದಾರ್ಢ್ಯ ಪಟು ಯಾಸೀನ್ ಪೈಲ್ವಾನ್ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಡು ಬಡತನದಲ್ಲಿರುವ ಉತ್ತರಪ್ರದೇಶದ ಹಾಗೂ ಬಿಹಾರಗಳ ತಂದೆ ತಾಯಿಯರಿಗೆ 20 ಸಾವಿರ ರು.ಗಳನ್ನು ನೀಡಿ ಮಕ್ಕಳನ್ನು ಕರೆ ತರಲಾಗಿತ್ತು. ಈ ಮಕ್ಕಳನ್ನೆಲ್ಲಾ ಕಟ್ಟಡವೊಂದರಲ್ಲಿ ಕೂಡಿ ಹಾಕಿ. ಈ ಮಕ್ಕಳನ್ನು ಬಳೆಗಳು, ಚರ್ಮದ ವಸ್ತುಗಳ ತಯಾರಿಕೆ ಸೇರಿದಂತೆ ಕಠಿಣ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿತ್ತು.

ಅಕ್ರಮ ಅವ್ಯವಹಾರಗಳಲ್ಲಿ ತೊಡಗಿದ್ದ ರೌಡಿ ಶೀಟರ್‌ಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ ಕಾರ್ಯಾಚರಣೆ ವೇಳೆ ಅಕ್ಷರಶಃ ಈ ಮಕ್ಕಳನ್ನು ಕಂಡು ಸ್ವತಃ ಪೊಲೀಸರೇ ಕೆಲಕಾಲ ದಿಗ್ಬ್ರಮೆಗೊಂಡಿದ್ದರು. ಮಕ್ಕಳನ್ನು ದುಡಿಸಿಕೊಳ್ಳುತ್ತಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ದಿಢೀರ್ ಕಾರ್ಯಾಚರಣೆ ವೇಳೆ ಮಕ್ಕಳು ಪತ್ತೆಯಾಗಿದ್ದು, ಮಕ್ಕಳನೆಲ್ಲ ಅತ್ಯಂತ ಕೊಳಕು ಪ್ರದೇಶದಲ್ಲಿರಿಸಲಾಗಿತ್ತು. ಅವರಲ್ಲಿ ಅನೇಕ ಮಕ್ಕಳು ಅನಾರೋಗ್ಯ ಹಾಗೂ ಗಾಯಗಳಿಂದ ನರಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?