ಎಎಪಿ ಮುಖಂಡ ಸಂಜಯ್ ಸಿಂಗ್ ಮತ್ತು ವಿವಾದಿತ ಪೋಸ್ಟರ್ (ಸಂಗ್ರಹ ಚಿತ್ರ) 
ದೇಶ

'ಭಾರತೀಯ ನೋಟಿಸ್ ಪಾರ್ಟಿ': ಆಪ್

ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರು ನೋಟಿಸ್ ನೀಡಿರುವ ವಿರುದ್ಧ ಆಮ್ ಆದ್ಮಿ ಪಕ್ಷ ಕಿಡಿಕಾರಿದ್ದು..

ನವದೆಹಲಿ: ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರು ನೋಟಿಸ್ ನೀಡಿರುವ ವಿರುದ್ಧ ಆಮ್ ಆದ್ಮಿ ಪಕ್ಷ ಕಿಡಿಕಾರಿದ್ದು, ಬಿಜೆಪಿಯನ್ನು 'ಭಾರತೀಯ ನೋಟಿಸ್ ಪಾರ್ಟಿ' ಎಂದು ವ್ಯಂಗ್ಯವಾಡಿದೆ.

ಬಿಜೆಪಿ ನೋಟಿಸ್ ಕುರಿತಂತೆ ಇಂದು ದೆಹಲಿಯಲ್ಲಿ ಮಾತನಾಡಿರುವ ಆಪ್ ಮುಖಂಡ ಸಂಜಯ್ ಸಿಂಗ್ ಅವರು, 'ಬಿಜೆಪಿ ಮುಖಂಡರಿಗೆ ಮಾಡಲು ಬೇರೇನೂ ಕೆಲಸವಿಲ್ಲ. ಹೀಗಾಗಿ ಸುಖಾಸುಮ್ಮನೆ ನೋಟಿಸ್ ನೀಡುತ್ತಿದ್ದಾರೆ. ಈ ಹಿಂದೆ ನಿತಿನ್ ಗಡ್ಕರಿ ಅವರು, ಆರ್‌ಪಿಸಿಂಗ್ ಅವರು, ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ ಅವರು ನೋಟಿಸ್ ನೀಡಿದ್ದರು. ಈಗ ಕಿರಣ್ ಬೇಡಿ ಅವರ ಸರದಿಯಷ್ಟೇ, ಅವರಿಗೂ ಬಿಜೆಪಿ ಅವರು ನೋಟಿಸ್ ಕಳುಹಿಸುವ ಕುರಿತು ಪಾಠ ಹೇಳಿಕೊಟ್ಟಿರಬೇಕು. ಹೀಗಾಗಿ ಅವರು ನೋಟಿಸ್ ನೀಡಿದ್ದಾರೆ' ಎಂದು ಅವರು ಹೇಳಿದರು.

ಅಲ್ಲದೆ 'ಬನಾರಸ್‌ನಲ್ಲಿ ಬಿಜೆಪಿ ಕೂಡ ಎಎಪಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಪ್ರಕಟಿಸುತ್ತಿದ್ದು, ತನ್ನ ಸಾಮಾಜಿಕ ಜಾಲತಾಣದಲ್ಲಿ ಕೇಜ್ರಿವಾಲ್ ಅವರ ಭಾವಚಿತ್ರವನ್ನು ಬಳಕೆ ಮಾಡಿದೆ. ಅಲ್ಲದೆ ಅವರನ್ನು ತೀಕ್ಷ್ಣವಾಗಿ ಟೀಕಿಸಿದೆ. ಇದನ್ನು ಯಾರನ್ನು ಕೇಳಿ ಬಿಜೆಪಿ ಮಾಡಿತ್ತು. ನಮ್ಮನ್ನು ತಡೆಯಲು ಬಿಜೆಪಿ ಯತ್ನಿಸುತ್ತಿದೆ. ಹೀಗಾಗಿ ನೋಟಿಸ್ ನೀಡುತ್ತಿದೆ. ನಾವು ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ' ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಆಪ್ ಪಕ್ಷ ಪ್ರಕಟಿಸಿರುವ ಪೋಸ್ಟರ್‌ಗಳು ವಿವಾದಕ್ಕೆ ಕಾರಣವಾಗಿದ್ದು, ಪೋಸ್ಟರ್ ವಿರುದ್ಧ ಬಿಜೆಪಿ ಕಾನೂನು ಕ್ರಮಕ್ಕೆ ಮುಂದಾಗಿದೆ. ಎಎಪಿಯ ವಿವಾದಿತ ಪೋಸ್ಟರ್‌ನಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರ ಭಾವಚಿತ್ರಗಳಿರುವ ಪೋಸ್ಟರ್‌ಗಳನ್ನು ಬಳಕೆ ಮಾಡಲಾಗುತ್ತಿದೆ.

'ನಿಷ್ಟಾವಂತ ಅರವಿಂದ್ ಕೇಜ್ರಿವಾಲ್ ಬೇಕೋ ಅಥವಾ ಅವಕಾಶವಾದಿ ಕಿರಣ್ ಬೇಡಿ ಅವರು ಬೇಕೋ ಎಂದು ನೀವೇ ನಿರ್ಧರಿಸಿ' ಎಂಬ ವಿವಾದಾತ್ಮಕ ಪೋಸ್ಟರ್‌ಗಳನ್ನು ಆಟೋಗಳ ಹಿಂಬದಿಯಲ್ಲಿ ಅಂಟಿಸಿ ಎಎಪಿ ಪ್ರಚಾರ ಮಾಡುತ್ತಿದೆ. ಇದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದು, ಇದೀಗ ಆಮ್ ಆದ್ಮಿ ಪಕ್ಷದ ವಿರುದ್ಧ ಕಾನೂನು ಕ್ರಮ ಜರುಗಿಸಲು ಬಿಜೆಪಿ ಮುಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT