ಮಿಗ್ 27 ವಿಮಾನ ಪತನ ದೃಶ್ಯ (ಸಂಗ್ರಹ ಚಿತ್ರ) 
ದೇಶ

ರಾಜಸ್ಥಾನದಲ್ಲಿ ಮಿಗ್ 27 ಯುದ್ಧ ವಿಮಾನ ಪತನ

ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಮಿಗ್ 27 ಲಘು ಯುದ್ಧವಿಮಾನ ಪತನವಾಗಿದ್ದು, ಅದೃಷ್ಟವಶಾತ್ ಇಬ್ಬರು ಪೈಲಟ್‌ಗಳು..

ಬಾರ್ಮರ್: ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಮಿಗ್ 27 ಲಘು ಯುದ್ಧವಿಮಾನ ಪತನವಾಗಿದ್ದು, ಅದೃಷ್ಟವಶಾತ್ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜಸ್ಥಾನದ ಬಾರ್ಮರ್‌ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪೈಲಟ್‌ಗಳ ನಿಯಂತ್ರಣ ಕಳೆದುಕೊಂಡ ವಿಮಾನ ನೇರವಾಗಿ ಬೈಕ್ ಸವಾರನ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ವಿಮಾನದ  ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್ ಸವಾರನಿಗೆ ಸಣ್ಣಪುಟ್ಟ ತರಚು ಗಾಯಗಳು ಮತ್ತು ಸುಟ್ಟ ಗಾಯಗಳಾಗಿವೆ. ಪ್ರಸ್ತುತ ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾರ್ಮರ್ ನಿವಾಸಿದಾಯ ಲೂನ್ ಸಿಂಗ್ ಎಂಬಾತ ಮದುವೆ ಆಮಂತ್ರಣ ಪತ್ರಿಕೆಯನ್ನು ಹಂಚಲು ತನ್ನ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಆಶ್ಚರ್ಯಕರ ರೀತಿಯಲ್ಲಿ ಲೂನ್ ಸಿಂಗ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜೋಧ್‌ಪುರದ ಸೇನಾ ಕ್ಯಾಂಪ್‌ನಿಂದ ಹೊರಟಿದ್ದ ಮಿಗ್ 27 ಲಘು ಯುದ್ಧ ವಿಮಾನವು ಉತ್ತರಲೈನತ್ತ ಪ್ರಯಾಣ ಆರಂಭಿಸಿತ್ತು.

ಮಾರ್ಗ ಮಧ್ಯೆ ವಿಮಾನದಲ್ಲಿ ತಾಂತ್ರಿಕ ದೋಷಗಳು ಕಂಡು ಬಂದ ಹಿನ್ನಲೆಯಲ್ಲಿ ವಿಮಾನವು ಪತನವಾಗುವ ವಿಚಾರ ತಿಳಿದ ಇಬ್ಬರು ಪೈಲಟ್‌ಗಳು ವಿಮಾನ ಪತನವಾಗುವ ಮುನ್ನವೇ ಹೊರಗೆ ಜಿಗಿದಿದ್ದಾರೆ. ಅಲ್ಲದೆ ವಿಮಾನ ಪತನವಾದ ಸ್ಥಳದಿಂದ ಸುಮಾರು 4 ಕಿ.ಮೀ ದೂರದಲ್ಲಿ ಪೈಲಟ್‌ಗಳು ಪಾರಾಚ್ಯೂಟ್‌ನಿಂದಾಗಿ ಸುರಕ್ಷಿತವಾಗಿ ಭೂಮಿಗೆ ಇಳಿದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ವಾಯುಸೇನಾ ಅಧಿಕಾರಿಗಳು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದ್ದಾರೆ. ಈಗಾಗಲೇ ವಿಮಾನದ ಇಬ್ಬರು ಪೈಲಟ್‌ಗಳ ವಿಚಾರಣೆಗೆ ಐಎಎಫ್ ಮುಂದಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಾಯು ಸೇನಾ ಅಧಿಕಾರಿಗಳು ದೌಡಾಯಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT