ದೇಶ

ಬಿಜೆಪಿ ಬಗ್ಗೆ ಮೃದುವಾಗಿದಿದ್ದರೆ, ಆಪ್ ನನಗೆ ಸಿಎಂ ಹುದ್ದೆ ಆಫರ್ ಮಾಡಿದ್ದೇಕೆ?: ಕಿರಣ್ ಬೇಡಿ

Lingaraj Badiger

ನವದೆಹಲಿ: ಹಿಂದೆ ನಾನು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದೆಯಾದರೆ, ಆಮ್ ಆದ್ಮಿ ಪಕ್ಷ ನನಗೆ ಮುಖ್ಯಮಂತ್ರಿ ಹುದ್ದೆಯ ಆಫರ್ ಮಾಡಿದ್ದೇಕೆ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರು ಬುಧವಾರ ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರ ವಿರೋಧ ಹೋರಾಟದ ವೇಳೆ ಕಿರಣ್ ಬೇಡಿ ಅವರು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದರು. ಅಲ್ಲದೆ ಅರವಿಂದ್ ಕೇಜ್ರಿವಾಲ್ ಅವರಿಗೂ ಬಿಜೆಪಿ ಬಗ್ಗೆ ಮೃದು ಧೋರಣೆ ತಾಳುವಂತೆ ಕೇಳಿಕೊಂಡಿದ್ದರು ಎಂದು ಆಪ್ ನಾಯಕ ಕುಮಾರ್ ವಿಶ್ವಾಸ ಅವರು ಆರೋಪಿಸಿದ್ದರು.

ಈ ಕುರಿತು ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿರುವ ಕಿರಣ್ ಬೇಡಿ, ನನ್ನ ಮೇಲೆ ಅವರಿಗೆ ನಂಬಿಕೆ ಇಲ್ಲದಿದ್ದರೆ, ಅವರು ಏಕೆ ನನಗೆ ಮುಖ್ಯಮಂತ್ರಿ ಹುದ್ದೆಯ ಆಫರ್ ನೀಡಿದ್ದರು ಎಂದು ಪ್ರಶ್ನಿಸಿದ್ದಾರೆ.

ಕುಮಾರ್ ವಿಶ್ವಾಸ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಈ ಮುಂಚೆ ಕಿರಣ್ ಬೇಡಿ ನಿರಾಕರಿಸಿದ್ದರು. ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ನನಗೆ ಸಮಯ ಇಲ್ಲ. ನಾನು ಜನರಿಗಾಗಿ ಕೆಲಸ ಮಾಡಬೇಕಿದೆ ಎಂದಿದ್ದರು.

SCROLL FOR NEXT