ಶಾಲಾ ಬಸ್ ಪಲ್ಟಿಯಾಗಿ 9 ವಿದ್ಯಾರ್ಥಿಗಳಿಗೆ ಗಾಯ 
ದೇಶ

ಶಾಲಾ ಬಸ್ ಪಲ್ಟಿ 9 ಮಕ್ಕಳಿಗೆ ಗಾಯ

ಬಳ್ಳಾರಿ ರಸ್ತೆ ಜಕ್ಕೂರು ಮುಖ್ಯರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಚಾಲಕನ ನಿಯಂತ್ರಣ...

ಬೆಂಗಳೂರು: ಬಳ್ಳಾರಿ ರಸ್ತೆ ಜಕ್ಕೂರು ಮುಖ್ಯರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಚಾಲಕನ ನಿಯಂತ್ರಣ ಕಳೆದುಕೊಂಡ ಶಾಲಾ ಬಸ್ ಪಲ್ಟಿಯಾಗಿ 9 ವಿದ್ಯಾರ್ಥಿಗಳು ಹಾಗೂ ಒಬ್ಬ ಸಹಾಯಕ ಗಾಯಗೊಂಡಿದ್ದಾನೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬೈಪಾಸ್ ರಸ್ತೆಯಲ್ಲಿರುವ ವಿದ್ಯಾಶಿಲ್ಪ ಅಕಾಡೆಮಿಗೆ ಸೇರಿದ ಶಾಲಾ ಬಸ್ ಪ್ರಾಥಮಿಕ ಶಾಲೆಯ 20 ವಿದ್ಯಾರ್ಥಿಗಳನ್ನು ಕರೆದುಕೊಂಡು ಮನೆಗೆ ಡ್ರಾಪ್ ಮಾಡಲು ಹೋಗುತ್ತಿತ್ತು. ಮಧ್ಯಾಹ್ನ 12.30ರ ಸುಮಾರಿಗೆ ಜಕ್ಕೂರು ಮುಖ್ಯರಸ್ತೆಗೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಬಸ್ ವೇಗವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕದ ಮೇಲೆ ಹತ್ತಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಭವಿಸಿದಾಗ ಬಸ್‍ನಲ್ಲಿ 20 ವಿದ್ಯಾರ್ಥಿಗಳು, ಸಹಾಯಕ ಇದ್ದರು. ದಾರಿ ಹೋಕರಿಬ್ಬರು ಬಸ್ ಬೀಳುತ್ತಿದ್ದಂತೆ ಮಕ್ಕಳ ಸಹಾಯಕ್ಕೆ ಓಡಿ ಬಂದಿದ್ದಾರೆ. ಬಸ್ ಮೇಲೆ ಹತ್ತಿ ಕಿಟಕಿ ಗಾಜುಗಳನ್ನು ಒಡೆದು ಒಳಗೆ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊರಗೆ ಎಳೆದುಕೊಂಡಿದ್ದಾರೆ. ಗಾಯಗೊಂಡಿದ್ದ ಮಕ್ಕಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮೂವರು ವಿದ್ಯಾರ್ಥಿಗಳು ಮಾತ್ರ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಚಿಕಿತ್ಸೆ ಪಡೆದು ಮನೆಗೆ ಮರಳಿದರು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ 9 ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳಿಗೆ ಹಾಗೂ ಸಹಾಯಕನಿಗೆ ಮಾತ್ರ ತಲೆಗೆ ಪೆಟ್ಟಾಗಿದ್ದು ಹೊಲಿಗೆ ಹಾಕಲಾಗಿದೆ. ಹೀಗಾಗಿ ಅವರನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಬೇಗ ಮನೆಗೆ ಹೊರಟಿದ್ದರು
ಪ್ರತಿದಿನ ಶಾಲೆ ಅವ„ 3.30ಕ್ಕೆ ಮುಗಿಯುತ್ತದೆ. ಆದರೆ, ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೀಗಾಗಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬೇಗ ಮನೆಗೆ ತೆರಳಲು ಅವಕಾಶ ಕಲ್ಪಿಸಲಾಗಿತ್ತು. ತಮ್ಮ ಮಕ್ಕಳು ಬೇಗನೆ ಮನೆಗೆ ಬರುತ್ತಿರುವುದು ಹಾಗೂ ಅಪಘಾತ ಸಂಭವಿಸಿರುವುದು ಗೊತ್ತಿರಲಿಲ್ಲ.

 ಶಾಲೆ ಆಡಳಿತ ಮಂಡಳಿ ಮಾಹಿತಿ ನೀಡಿದಾಗಲೇ ಗೊತ್ತಾಯಿತು ಎಂದು ಗಾಯಗೊಂಡ ವಿದ್ಯಾರ್ಥಿಯ ಪಾಲಕರು ತಿಳಿಸಿದರು. ಬಸ್‍ನಲ್ಲಿ ಪುಟ್ಟ ಮಕ್ಕಳಿರುತ್ತಾರೆ ಎನ್ನುವುದರ ಅರಿವು ಬಸ್ ಚಾಲಕನಿಗೆ ಇರಬೇಕು. ಎಚ್ಚರಿಕೆಯಿಂದ ಚಲಾಯಿಸಬೇಕಿತ್ತು. ಆದರೆ, ಶಾಲಾ ಬಸ್ಸಿನ ಚಾಲಕನ ನಿರ್ಲಕ್ಷ್ಯತನದಿಂದ ದುರಂತಕ್ಕೆ ಕಾರಣವಾಗಿದೆ ಎಂದು ಮತ್ತೊಬ್ಬ ಪಾಲಕ ತಿಳಿಸಿದರು. ಪ್ರಕರಣ ಸಂಬಂಧ ನಿರ್ಲಕ್ಷ್ಯತನ ಚಾಲನೆ ಆರೋಪದ ಮೇಲೆ ಬಸ್ ಚಾಲಕ ವಿಜೇಂದ್ರನನ್ನು ಯಲಹಂಕ ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT