ದೇಶ

ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ವಿನಯ್ (33) ಎಂಬಾತನನ್ನು ಬಂಧಿಸಿ...

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ವಿನಯ್ (33) ಎಂಬಾತನನ್ನು ಬಂಧಿಸಿ ರು6.5 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಶಾಂತಿನಗರ ನಿವಾಸಿಯಾಗಿರುವ ವಿನಯ್  ಕಲಾಸಿಪಾಳ್ಯ ಹೊಸ ಬಡಾವಣೆ ಎ.ಎಂ.ರಸ್ತೆಯಲ್ಲಿರುವ ಮನು ಟೈರ್ಸ್ ಅಂಗಡಿಯಲ್ಲಿ ಜ.28ರಂದು ಸಿಡ್ನಿ ಸಿಕ್ಸರ್ಸ್ ಮತ್ತು ಪರ್ತ್ ಸ್ಕಾಚರ್ಸ್ ತಂಡಗಳ ನಡುವಿನ ಬಿಗ್ ಬಾಷ್ ಟೂರ್ನಮೆಂಟ್‍ನ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ರು6.5 ಲಕ್ಷ ನಗದು ಜತೆಗೆ ಒಂದು ಲ್ಯಾಪ್ ಟಾಪ್, ಎರಡು ಮೊಬೈಲ್ ಫೋನ್ ಹಾಗೂ ಇತರೆ ಪರಿಕರಗಳನ್ನು ವಶಪಡಿಸಿಕೊಂಡಿದೆ.

ಆರೋಪಿ  ವಿರುದ್ಧ  ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಬೈಲ್ ಬೆಟ್ಟಿಂಗ್ ಡಾಟ್ ಕಾಂ ವೆಬ್‍ಸೈಟ್ ಮೂಲಕ ಬೆಂಗಳೂರು ಹಾಗೂ ಮುಂಬೈ ಪಂಟರ್ಸ್‍ಗಳಿಂದ ಆರೋಪಿ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ತಾನು ಕಟ್ಟಿಸಿಕೊಂಡ ಬೆಟ್ಟಿಂಗ್ ಹಣವನ್ನು ತನಗಿಂತಲೂ ದೊಡ್ಡ ಬುಕ್ಕಿಯಾದ ರಾಜಸ್ಥಾನದ ಕಾಕು ಎಂಬುವನ ಬಳಿ ಕಟ್ಟುತ್ತಿದ್ದನು. ಅದಕ್ಕೆ ಕಾಕುವಿನಿಂದ ಶೇ.15ರಷ್ಟು ಕಮಿಷನ್ ಪಡೆಯುತ್ತಿದ್ದಾಗಿ ವಿನಯ್ ವಿಚಾರಣೆ ವೇಳೆ ತಿಳಿಸಿದ್ದಾನೆ.

ಮತ್ತೊಂದು ದಾಳಿ: ಬಾಣಸವಾಡಿ ರಾಮಸ್ವಾಮಿಪಾಳ್ಯ
ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಆನಂದ(37) ಎಂಬ ಬುಕ್ಕಿಯನ್ನು ಬಂಧಿಸಿ ರು 67 ಸಾವಿರ ನಗದು, 1 ಮೊಬೈಲ್  ಫೋನ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT