ದೇಶ

ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ವಿನಯ್ (33) ಎಂಬಾತನನ್ನು ಬಂಧಿಸಿ...

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ವಿನಯ್ (33) ಎಂಬಾತನನ್ನು ಬಂಧಿಸಿ ರು6.5 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಶಾಂತಿನಗರ ನಿವಾಸಿಯಾಗಿರುವ ವಿನಯ್  ಕಲಾಸಿಪಾಳ್ಯ ಹೊಸ ಬಡಾವಣೆ ಎ.ಎಂ.ರಸ್ತೆಯಲ್ಲಿರುವ ಮನು ಟೈರ್ಸ್ ಅಂಗಡಿಯಲ್ಲಿ ಜ.28ರಂದು ಸಿಡ್ನಿ ಸಿಕ್ಸರ್ಸ್ ಮತ್ತು ಪರ್ತ್ ಸ್ಕಾಚರ್ಸ್ ತಂಡಗಳ ನಡುವಿನ ಬಿಗ್ ಬಾಷ್ ಟೂರ್ನಮೆಂಟ್‍ನ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ರು6.5 ಲಕ್ಷ ನಗದು ಜತೆಗೆ ಒಂದು ಲ್ಯಾಪ್ ಟಾಪ್, ಎರಡು ಮೊಬೈಲ್ ಫೋನ್ ಹಾಗೂ ಇತರೆ ಪರಿಕರಗಳನ್ನು ವಶಪಡಿಸಿಕೊಂಡಿದೆ.

ಆರೋಪಿ  ವಿರುದ್ಧ  ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಬೈಲ್ ಬೆಟ್ಟಿಂಗ್ ಡಾಟ್ ಕಾಂ ವೆಬ್‍ಸೈಟ್ ಮೂಲಕ ಬೆಂಗಳೂರು ಹಾಗೂ ಮುಂಬೈ ಪಂಟರ್ಸ್‍ಗಳಿಂದ ಆರೋಪಿ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ತಾನು ಕಟ್ಟಿಸಿಕೊಂಡ ಬೆಟ್ಟಿಂಗ್ ಹಣವನ್ನು ತನಗಿಂತಲೂ ದೊಡ್ಡ ಬುಕ್ಕಿಯಾದ ರಾಜಸ್ಥಾನದ ಕಾಕು ಎಂಬುವನ ಬಳಿ ಕಟ್ಟುತ್ತಿದ್ದನು. ಅದಕ್ಕೆ ಕಾಕುವಿನಿಂದ ಶೇ.15ರಷ್ಟು ಕಮಿಷನ್ ಪಡೆಯುತ್ತಿದ್ದಾಗಿ ವಿನಯ್ ವಿಚಾರಣೆ ವೇಳೆ ತಿಳಿಸಿದ್ದಾನೆ.

ಮತ್ತೊಂದು ದಾಳಿ: ಬಾಣಸವಾಡಿ ರಾಮಸ್ವಾಮಿಪಾಳ್ಯ
ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಆನಂದ(37) ಎಂಬ ಬುಕ್ಕಿಯನ್ನು ಬಂಧಿಸಿ ರು 67 ಸಾವಿರ ನಗದು, 1 ಮೊಬೈಲ್  ಫೋನ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT