ಜಯಂತಿ ನಟರಾಜನ್ 
ದೇಶ

ಕಾಂಗ್ರೆಸ್‌ಗೆ ಜಯಂತಿ ನಟರಾಜನ್ ವಿದಾಯ ಸಾಧ್ಯತೆ

ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಅವರು ರಾಹುಲ್ ವಿರುದ್ಧ ಅಸಮಾಧಾನಗೊಂಡಿದ್ದು, ಪಕ್ಷದಿಂದ ಹೊರಬರುವ...

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಅವರು ರಾಹುಲ್ ವಿರುದ್ಧ ಅಸಮಾಧಾನಗೊಂಡಿದ್ದು, ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಶುಕ್ರವಾರ ಜಯಂತಿ ನಟರಾಜನ್ ಅವರು ಪತ್ರಿಕಾಗೋಷ್ಠಿ ನಡಸಲಿದ್ದು, ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪಕ್ಷದಲ್ಲಿ ತನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಜಯಂತಿ ನಟರಾಜನ್ ಸೊನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ರಾಹುಲ್ ಗಾಂಧಿ ಆಪ್ತರು ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವುದಲ್ಲದೇ, ಮಾಧ್ಯಮಗಳಿಗೇ ಇಲ್ಲದ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಜಯಂತಿ ನಟರಾಜನ್ ಪತ್ರದಲ್ಲಿ ತಿಳಿಸಿದ್ದಾರೆ.

ಯುಪಿಎ ಸರ್ಕಾರದಲ್ಲಿ ಪರಿಸರ ಖಾತೆ ಸಚಿವರಾಗಿದ್ದ ಜಯಂತಿ ನಟರಾಜನ್ ಪರಿಸರ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆಯುತ್ತಾರೆ ಎಂಬು ಆರೋಪ ಕೇಳಿಬಂದಿತ್ತು.

ಲೋಕಸಭಾ ಚುನಾವಣೆ ಸಂದರ್ಭಧಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಮೇರೆಗೆ ಜಯಂತಿ ರಾಜನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಒತ್ತಾಯ ಪೂರ್ವಕವಾಗಿ ನನ್ನಿಂದ ರಾಜಿನಾಮೆ ನೀಡಿಸಿದ್ದು, ಪಕ್ಷದ ನಾಯಕರಿಂದಲೇ ಸಂಕಷ್ಟ ಎದುರಿಸುದ್ದೇನೆ ಎಂದು ಜಯಂತಿ ಹೇಳಿಕೊಂಡಿದ್ದಾರಂತೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯೋಗೇಶ್ ಗೌಡ ಹತ್ಯೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ, ಮಹತ್ವದ ತೀರ್ಪು!

ಟಿ20 ವಿಶ್ವಕಪ್‌ಗೆ ಕಳಂಕ: ಚೆನ್ನೈ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ? ತನಿಖೆ ಕೈಗೊಂಡ ICC!

ನಾನು 20 ವರ್ಷದಲ್ಲಿ ಮಾಡಲಾಗದ್ದನ್ನು ನನ್ನ ತಂಗಿ 5 ನಿಮಿಷದಲ್ಲಿ ಮಾಡಿ ತೋರಿದಳು, ನಮ್ ಇಬ್ರಿಗೂ ಹೆಂಡ್ತಿ ಸಮಸ್ಯೆ ಇಲ್ಲ: ನಗೆಗಡಲಲ್ಲಿ ತೇಲಿಸಿದ Rahul gandhi

Vijay-Rashmika's Coorg Honeymoon: ಒಂದು ನೈಟ್ ಗೆ ರೆಸಾರ್ಟ್ ಗೆ ಕೊಟ್ಟಿದ್ದು ಎಷ್ಟು ಲಕ್ಷ ಗೊತ್ತಾ?

Video: ರಾಹುಲ್ ಗಾಂಧಿ ದೊಡ್ಡ 'ತಲೆನೋವು'; ಕಂಗನಾ ರನೌತ್ ಹೀಗೆ ಹೇಳಿದ್ಯಾಕೆ?

SCROLL FOR NEXT