ಸಿಪಿಎಂ ಮುಖಂಡ ಪಿವಿ ಜಯರಾಜನ್ (ಸಂಗ್ರಹ ಚಿತ್ರ) 
ದೇಶ

ನ್ಯಾಯಾಧೀಶರ ವಿರುದ್ಧ ಹೇಳಿಕೆ: ಸಿಪಿಎಂ ಮುಖಂಡನಿಗೆ ಜೈಲು ಶಿಕ್ಷೆ

ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಸಿಪಿಎಂ ಮುಖಂಡ ಪಿವಿ ಜಯರಾಜನ್ ಅವರಿಗೆ...

ಕೊಚ್ಚಿ: ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಸಿಪಿಎಂ ಮುಖಂಡ ಪಿವಿ ಜಯರಾಜನ್ ಅವರಿಗೆ ನ್ಯಾಯಾಲಯ 4 ವಾರಗಳ ಜೈಲು ಶಿಕ್ಷೆ ವಿಧಿಸಿದೆ.

2010ರ ಜೂನ್ ತಿಂಗಳಲ್ಲಿ ಕೇರಳದ ಕಣ್ಣೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಸಭೆಯೊಂದರಲ್ಲಿ ಸಿಪಿಎಂ ಮುಖಂಡ ಪಿವಿ ಜಯರಾಜನ್ ಅವರು ಹೈಕೋರ್ಟ್ ನ್ಯಾಯಾಧೀಶರೋರ್ವರನ್ನು ಅವಿವೇಕಿ ಎಂದು ಜರಿದಿದ್ದರು. ಜಯರಾಜನ್ ಅವರ ಸಾರ್ವಜನಿಕ ಸಭೆಯನ್ನು ನ್ಯಾಯಾಲಯ ರದ್ದುಗೊಳಿಸಿದ್ದರಿಂದ ಕುಪಿತರಾಗಿದ್ದ ಜಯರಾಜನ್ ಈ ರೀತಿ ಸಾರ್ವಜನಿಕ ಹೇಳಿಕೆ ನೀಡಿದ್ದರು.

ಈ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ದೂರು ಕೂಡ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 2011 ನವೆಂಬರ್ ತಿಂಗಳನಲ್ಲಿ ಜಯರಾಜನ್‌ಗೆ 6 ತಿಂಗಳ ಸೆರವಾಸ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು.

ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಜಯರಾಜನ್ ಅವರು, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ಸತತ ವಿಚಾರಣೆ ಬಳಿಕ ಸುಪ್ರೀಂಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನೇ ಎತ್ತಿಹಿಡಿದಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಮಾತ್ರ ಕಡಿತಗೊಳಿಸಿದ್ದು, 4 ತಿಂಗಳ ಸೆರೆವಾಸ ಶಿಕ್ಷೆ ನೀಡಿದೆ. ಅಲ್ಲದೆ 2 ಸಾವಿರ ರು.ಗಳ ದಂಡ ಕೂಡ ಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT