ದೇಶ

ವಿಧಾನಸೌಧ ಮುತ್ತಿಗೆ ಯತ್ನ

ಕಾಲೇಜು ಶಿಕ್ಷಣ ಶುಲ್ಕ ಇಳಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತೀಯ...

ಬೆಂಗಳೂರು: ಕಾಲೇಜು ಶಿಕ್ಷಣ ಶುಲ್ಕ ಇಳಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್ಐ) ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಸಂಚಾರ ದಟ್ಟಣೆ ಉಂಟುಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಹಾಗೂ ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ್ದೆವು. ಸರ್ಕಾರದ ಯಾರೊಬ್ಬರೂ ಸ್ಪಂದಿಸಲಿಲ್ಲ. ಹೀಗಾಗಿ ಶುಕ್ರವಾರ ಬೆಳಗ್ಗೆ ರೈಲು ನಿಲ್ದಾಣದಿಂದ ಮೆರವಣಿಗೆ ಹೊರಟು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯೋಜಿಸಿದ್ದೆವು. ಮೆರವಣಿಗೆ ಮಹಾರಾಣಿ ಕಾಲೇಜು ಜಂಕ್ಷನ್‍ನಿಂದ ಮುಂದಕ್ಕೆ ತೆರಳದಂತೆ ಪೊಲೀಸರು ತಡೆದರು. ಆದರೆ, ನಾವು ಹೋಗ ಲೇಬೇಕು ಎಂದಾಗ ಸಚಿವರೊಬ್ಬರು ಬರುವುದಾಗಿ ಪೊಲೀಸರು ಹೇಳಿದರು. ಹೀಗಾಗಿ, ನಾವು ರಸ್ತೆಯಲ್ಲಿ ಕುಳಿತೆವು.ಎಷ್ಟೊತ್ತಾದರೂ ಸಚಿವರು ಬರಲಿಲ್ಲ, ಆದರೆ ಪೊಲೀಸರು ನಮ್ಮನ್ನು ತೆರವುಗೊಳಿಸಲು ಯತ್ನಿಸಿ ಲಾಠಿಪ್ರಹಾರ ನಡೆಸಿದರು.

ಅಲ್ಲದೇ 80ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಲಾಠಿಪ್ರಹಾರದಿಂದ ಹಾಸನದ ವಿದ್ಯಾರ್ಥಿನಿಯರಾದ ಪೂಜಾ, ಗೌತು ಹಾಗೂ ಕೋಲಾರದ ಶಂಕರ ಎಂಬುವರು ಗಾಯ ಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಎಸ್‍ಎಫ್ಐ ಕಾರ್ಯಕರ್ತರು ಹೇಳಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಸಂಜೆ ತಮ್ಮನ್ನು ಭೇಟಿ ಮಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಫೆ..6ರಂದು ಬೇಡಿಕೆಗಳ ಬಗ್ಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆಂದು ಕಾರ್ಯಕರ್ತರು ಮಾಹಿತಿ ನೀಡಿದರು.

ಟ್ರಾಫಿಕ್ ಜಾಮ್
ಪ್ರತಿಭಟನಾ ವೇಳೆ ಮೆರವಣಿಗೆ  ಹಿನ್ನೆಲೆಯಲ್ಲಿ  ಶೇಷಾದ್ರಿ ರಸ್ತೆ, ರೈಲು ನಿಲ್ದಾಣ, ಓಕಳಿಪುರ, ಮೆಜೆಸ್ಟಿಕ್ ಸುತ್ತ ಸುಮಾರು 1 ತಾಸಿಗೂ ಹೆಚ್ಚು ಕಾಲ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT