ನರೇಂದ್ರ ಮೋದಿ 
ದೇಶ

ನಿಮಗೆ ಮೋದಿ ಅದೃಷ್ಟವಂತನಾದರೆ, ದುರದೃಷ್ಟವಂತರಿಗೆ ಯಾಕೆ ಮತ: ಮೋದಿ

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಳಿದಿದೆಯೋ ಇಲ್ಲವೋ?...

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಳಿದಿದೆಯೋ ಇಲ್ಲವೋ? ಆದರೆ ನನ್ನ ವಿರೋಧಿಗಳು ಮಾತ್ರ ಪೆಟ್ರೋಲ್ ಬೆಲೆ ಇಳಿಕೆಯಲ್ಲಿ ಮೋದಿ ಅವರ ಪ್ರಯತ್ನ ಏನು ಎಂದು ಪ್ರಶ್ನಿಸುತ್ತಾರೆ.

ಫೆಬ್ರವರಿ 7 ರಂದು ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯ ದ್ವಾರಕದಲ್ಲಿ ಬೃಹತ್ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ನನ್ನ ಅವಧಿಯಲ್ಲಿ ಬೆಲೆ ಇಳಿಯೋಕೆ ಅದೃಷ್ಟ ಕಾರಣವಂತೆ. ಹಾಗಾದರೆ ನಾನು ಅದೃಷ್ಠವಂತನಾಗಿರುವುದು ದೇಶಕ್ಕೆ ಲಾಭ. ಹಾಗಗಿ ನಿಮಗೆ ಅದೃಷ್ಟವಂತ ಪ್ರಧಾನಿ ಬೇಕೋ? ದುರದೃಷ್ಟವಂತರ ಸರ್ಕಾರ ಬೇಕೋ? ನೀವೇ ಹೇಳಿ ಎಂದು ದೆಹಲಿ ಜನತೆಯನ್ನು ಪ್ರಶ್ನಿಸಿದ್ದಾರೆ.

ನನ್ನ ಸ್ವಂತಕ್ಕಾಗಿ ನಾನು ನಿಮ್ಮಲ್ಲಿ ಏನನ್ನೂ ಬೇಡುವುದಿಲ್ಲ. ದೆಹಲಿ ಮತ್ತು ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಎರಡೂ ರಾಜ್ಯಗಳಲ್ಲೂ ನೀರಿನ ಸಮಸ್ಯೆ ಇತ್ತು. ಆದರೆ ಅದಕ್ಕೆ ಪರಿಹಾರ ಸಿಕ್ಕಿಲ್ಲವಾಗಿತ್ತು. ಈಗ ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಇದೆ. ಅಲ್ಲಿ ನೀರಿನ ಸಮಸ್ಯೆಯನ್ನು ಪರಿಹರಿಸಿದ್ದೇವೆ. ಅದೇ ರೀತಿಯಲ್ಲಿ ದೆಹಲಿಗೆ ಸ್ಥಿರ ಸರ್ಕಾರ ಬೇಕು. ಈ ಬಾರಿ ನೀವು ಬಿಜೆಪಿಯನ್ನು ಗೆಲ್ಲಿಸಿ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT