ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

'ಶಾರದಾ' ತನಿಖೆಯಲ್ಲಿ ಟಿಎಂಸಿಗೆ ಅನ್ಯಾಯ: ಮಮತಾ ಆರೋಪ

ಶಾರದಾ ಚಿಟ್ ಫಂಡ್ ಹಗರಣದ ತನಿಖೆಯಲ್ಲಿ ಬಿಜೆಪಿ ಅನ್ಯಾಯ ಮಾಡುತ್ತಿದ್ದು, ಟಿಎಂಸಿ ಪಕ್ಷವನ್ನು...

ನವದೆಹಲಿ: ಶಾರದಾ ಚಿಟ್ ಫಂಡ್ ಹಗರಣದ ತನಿಖೆಯಲ್ಲಿ ಬಿಜೆಪಿ ಅನ್ಯಾಯ ಮಾಡುತ್ತಿದ್ದು, ಟಿಎಂಸಿ ಪಕ್ಷವನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಆರೋಪಿಸಿದ್ದಾರೆ.

ಇಂದು ಕೋಲ್ಕತಾದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡಿದ್ದ ಮಮತಾ ಬ್ಯಾನರ್ಜಿ ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಕುರಿತಂತೆ ಮಾತನಾಡಿದ್ದು, ಪ್ರಕರಣದ ತನಿಖೆಯಲ್ಲಿ ಬಿಜೆಪಿ ಆಟವಾಡುತ್ತಿದೆ. ತನಿಖೆಯಲ್ಲಿ ಟಿಎಂಸಿಗೆ ಅನ್ಯಾಯವಾಗುವಂತೆ ಮಾಡಿ ಟಿಎಂಸಿ ಪಕ್ಷವನ್ನು ಒಡೆಯಲು ಪ್ರಯತ್ನಿಸುತ್ತಿದೆ. ಅಲ್ಲದೆ, ಸಿಬಿಐ ತನಿಖೆಯಲ್ಲಿ ಬಿಜೆಪಿ ಮಧ್ಯೆ ಪ್ರವೇಶಿಸುತ್ತಿದ್ದು, ಟಿಎಂಸಿ ಪಕ್ಷದ ನಾಯಕರಾದ ಮದನ್ ಮಿತ್ರಾ, ಸುಭೆಂದು ಹಾಗೂ ಮುಕುಲ್ ರಾಯ್ ಅವರ ಮೇಲೆ ಒತ್ತಡವೇರುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ಎಷ್ಟು ಒತ್ತಡವೇರಲಾಗುತ್ತದೆಯೋ ಹೇರಲಿ, ಹಗರಣದ ತನಿಖೆಯಿಂದ ಪಕ್ಷ ಭಯಪಡುವುದಿಲ್ಲ. ಬಿಜೆಪಿ ವಿರುದ್ಧದ ನಮ್ಮ ಹೋರಾಟ ಮುಂದುವರೆಯುತ್ತಲೇ ಇರುತ್ತದೆ. ಒಂದು ವೇಳೆ ನನ್ನನ್ನು ಜೈಲಿಗೆ ಕಳುಹಿಸಿದರು ಕೂಡ ನನಗೆ ಭಯವಾಗುವುದಿಲ್ಲ. ಪ್ರಕರಣದಲ್ಲಿ ಪಕ್ಷದ ಯಾವುದೇ ನಾಯಕ ಜೈಲಿಗೆ ಹೋದರೂ ಪಕ್ಷ ಅವರ ಹಿಂದೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT