ಸಾಂದರ್ಭಿಕ ಚಿತ್ರ 
ದೇಶ

ನಕಲಿ ಪದವಿ ಹಗರಣ: ಬಿಹಾರದಲ್ಲಿ 1400 ಪ್ರಾಥಮಿಕ ಶಾಲಾ ಶಿಕ್ಷಕರ ರಾಜೀನಾಮೆ

ನಕಲಿ ಶಿಕ್ಷಣ ಪದವಿ ಪ್ರಮಾಣ ಪತ್ರ ನೀಡಿರುವವರ ವಿರುದ್ಧ ಬಿಹಾರ ಸರ್ಕಾರದ ಕಾನೂನು ಕ್ರಮಕ್ಕೆ ಹೆದರಿ 1.400 ಪ್ರಾಥಮಿಕ ಶಾಲಾ ಶಿಕ್ಷಕರು ರಾಜೀನಾಮೆ ನೀಡಿದ್ದಾರೆ.

ಪಾಟ್ನಾ: ನಕಲಿ ಶಿಕ್ಷಣ ಪದವಿ ಪ್ರಮಾಣ ಪತ್ರ ನೀಡಿರುವವರ ವಿರುದ್ಧ ಬಿಹಾರ ಸರ್ಕಾರದ ಕಾನೂನು ಕ್ರಮಕ್ಕೆ ಹೆದರಿ 1.400 ಪ್ರಾಥಮಿಕ ಶಾಲಾ ಶಿಕ್ಷಕರು ರಾಜೀನಾಮೆ ನೀಡಿದ್ದಾರೆ.

ನಕಲಿ ಪ್ರಮಾಣ ಪತ್ರ ನೀಡಿ ನೌಕರಿಗೆ ಸೇರಿದವರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಪಾಟ್ನಾ ಹೈಕೋರ್ಟ್ ಸೂಚನೆ ನೀಡಿತ್ತು. ಕಾನೂನು ಕ್ರಮ ಎದುರಿಸಬೇಕಾದ  ಹಿನ್ನೆಲೆಯಲ್ಲಿ 1.400 ಶಿಕ್ಷಕರು ತಮ್ಮ ಸೇವೆಗೆ ರಾಜೀನಾಮೆ ನೀಡಿದ್ದಾರೆ.

ನಕಲಿ ಪದವಿ ಪ್ರಮಾಣ ಪತ್ರ ನೀಡಿದ್ದ ಶಿಕ್ಷಕರಿಗೆ ರಾಜೀನಾಮೆ ನೀಡಲು ಜುಲೈ 8ರ ವರೆಗೆ ಗಡುವು ನೀಡಲಾಗಿತ್ತು. ಸದ್ಯಕ್ಕೆ 1.400 ಮಂದಿ ರಾಜೀನಾಮೆ ನೀಡಿದ್ದಾರೆ. ಜುಲೈ 8 ರ ನಂತರ ಒಟ್ಟಾರೆ ಚಿತ್ರಣ ದೊರೆಯುತ್ತದೆ ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಆರ್.ಕೆ ಮಹಾಜನ್ ಹೇಳಿದ್ದಾರೆ, ಇನ್ನು ಇಲಾಖೆ ನೀಡಿದ್ದ ನಿಗದಿತ ಅವಧಿಯಲ್ಲಿ ರಾಜೀನಾಮೆ ನೀಡದವರ ವಿರುದ್ಧ ಎಫ್ ಐ ಆರ್ ದಾಖಲಿಸಿ, ನೌಕರಿಯಿಂದ ವಜಾಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

ಬಿಹಾರದಲ್ಲಿ ಒಟ್ಟು 3.5 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರಿದ್ದು, ಅದರಲ್ಲಿ ಹೆಚ್ಚಿನ ಸಂಖ್ಯೆಯ ಶಿಕ್ಷಕರು ನೌಕರಿಗೆ ಸೇರಲು ನಕಲಿ ಪ್ರಮಾಣ ಪತ್ರಗಳನ್ನು ನೀಡಿದ್ದಾರೆ ಎಂದು ಪಾಟ್ನಾ ಹೈ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.  ಹೀಗಾಗಿ ಬಿಹಾರ ಸರ್ಕಾರ ಪ್ರಕರಣದ ತನಿಖೆ ನಡೆಸಲು ಜಾಗೃತ ದಳ ಅಧಿಕಾರಿಗಳಿಗೆ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT