ದೇಶ

ಏರ್ ಇಂಡಿಯಾ ವಿಮಾನ ಪ್ರಯಾಣ ವಿಳಂಬ: ಕ್ಷಮೆಯಾಚಿಸಿದ ವಿಮಾನಯಾನ ಸಚಿವ

ಬಿಜೆಪಿ ನಾಯಕರಿಂದ ಏರ್ ಇಂಡಿಯಾ ವಿಮಾನ ಪ್ರಯಾಣ ವಿಳಂಬ ಹಾಗೂ ಸಚಿವ ಕಿರಣ್ ರಿಜಿಜುಗಾಗಿ ಪ್ರಯಾಣಿಕರನ್ನು ಹೊರಹಾಕಿದ ಪ್ರಕರಣ ...

ನವದೆಹಲಿ: ಬಿಜೆಪಿ ನಾಯಕರಿಂದ ಏರ್ ಇಂಡಿಯಾ ವಿಮಾನ ಪ್ರಯಾಣ ವಿಳಂಬ ಹಾಗೂ ಸಚಿವ ಕಿರಣ್ ರಿಜಿಜುಗಾಗಿ ಪ್ರಯಾಣಿಕರನ್ನು ಹೊರಹಾಕಿದ ಪ್ರಕರಣ ಸಂಬಂಧ ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಅಶೋಕ್ ಗಜಪತಿ ರಾಜು ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿದ್ದಾರೆ. ಬಿಜೆಪಿ ನಾಯಕರಿಂದ ವಿಮಾನ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆ ಬಗ್ಗೆ ವಿಷಾಧ ವ್ಯಕ್ತ ಪಡಿಸಿದ ಅವರು, ಭವಿಷ್ಯದಲ್ಲಿ ಈ ರೀತಿಯ ಪ್ರಮಾದವಾಗಲು ಅವಕಾಶ ನೀಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ. ಕಿರಣ್ ರಿಜಿಜು ಪ್ರಕರಣ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಮೆರಿಕಾ ಪ್ರವಾಸದ ವೇಳೆ ಸೂಕ್ತ ವೀಸಾ ನೀಡದ್ದರಿಂದ ಅಮೆರಿಕಾ ವಿಮಾನ ಪ್ರಯಾಣ ವಿಳಂಬ ಸಂಬಂಧ ವರದಿ ನೀಡುವಂತೆ ಪ್ರದಾನಿ ಕಾರ್ಯಾಲಯ ವಿಮಾನ ಯಾನ ಸಚಿವಾಲಯಕ್ಕೆ ಸೂಚಿಸಿತ್ತು.ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವ ಅಶೋಕ್ ಗಜಪತಿ ರಾಜು ಪ್ರಧಾನಿ ಕಾರ್ಯಾಲಯಕ್ಕೆ ವರದಿ ನೀಡುವುದು ನಮ್ಮ ಕರ್ತವ್ಯ. ಹೀಗಾಗಿ ನಡೆದ ಎಲ್ಲಾ ಘಟನೆಗಳ ನೈಜ ವರದಿಯನ್ನು ಪ್ರಧಾನಿ ಕಾರ್ಯಾಲಯಕ್ಕೆ ನೀಡುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT