ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ 
ದೇಶ

ಅಮರನಾಥ್ ಯಾತ್ರಿಗಳ ಮೇಲೆ ದಾಳಿಯಾದರೆ ಹಜ್ ಯಾತ್ರಿಗಳಿಗೆ ಸಂಕಷ್ಟ: ಸಾಧ್ವಿ ಪ್ರಾಚಿ ಎಚ್ಚರಿಕೆ

ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಮತ್ತೆ ಸುದ್ದಿಯಲ್ಲಿದ್ದು, ಈ ಭಾರಿ ಅಮರನಾಥ ಯಾತ್ರಾರ್ಥಿಗಳನ್ನು ತಮ್ಮ ಹೇಳಿಕೆಯ ವಿಷಯವನ್ನಾಗಿಸಿಕೊಂಡಿದ್ದಾರೆ...

ಮುಜಾಫರನಗರ: ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಮತ್ತೆ ಸುದ್ದಿಯಲ್ಲಿದ್ದು, ಈ ಭಾರಿ ಅಮರನಾಥ ಯಾತ್ರಾರ್ಥಿಗಳನ್ನು ತಮ್ಮ ಹೇಳಿಕೆಯ ವಿಷಯವನ್ನಾಗಿಸಿಕೊಂಡಿದ್ದಾರೆ.
ಪ್ರಸ್ತುತ ಅಮರನಾಥ ದರ್ಶನಕ್ಕೆ ಕೇಂದ್ರ ಸರ್ಕಾರ ಅಮರನಾಥ ಯಾತ್ರೆಗೆ ಚಾಲನೆ ನೀಡಿದ್ದು, ಅವರ ರಕ್ಷಣೆಗಾಗಿ "ಆಪರೇಷನ್ ಶಿವ" ಎಂಬ ಹೆಸರಿನಲ್ಲಿ ಬಿಗಿ ಭಧ್ರತೆಯನ್ನೂ ಒದಗಿಸಿದೆ. ಇದರ ನಡುವೆಯೂ ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಅವರಿಗೆ ಅಮರಾನಾಥ ಯಾತ್ರಾರ್ಥಿಗಳ ಭದ್ರತೆ ಬಗ್ಗೆ ದಿಗಿಲು ಮೂಡಿದ್ದು, ಅವರ ಮೇಲೆ ಹಲ್ಲೆ ಅಥವಾ ಅವರಿಗೆ ಯಾವುದೇ ರೀತಿಯ ತೊಂದರೆ ನೀಡಿದರೆ ಹಜ್ ಯಾತ್ರಾರ್ಥಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ನೇರ ಎಚ್ಚರಿಕೆ ನೀಡಿದ್ದಾರೆ.
ಉತ್ತರ ಪ್ರದೇಶದ ಮುಜಾಫರನಗರದಲ್ಲಿ ಅಮರನಾಥ ಯಾತ್ರೆಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಹಲವು ಬಾರಿ ವಿನಾಕಾರಣ ಅಮರನಾಥ ಯಾತ್ರಾರ್ಥಿಗಳ ಮೇಲೆ ಹಲ್ಲೆಯಾಗಿತ್ತು. ಹೀಗಾಗಿ ಈ ಬಾರಿಯೂ ಅಮರನಾಥ ಯಾತ್ರಾರ್ಥಿಗಳ ಮೇಲೆ ಹಲ್ಲೆಯಾದರೆ ಖಂಡಿತ ಹಜ್ ಯಾತ್ರಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ದಾಳಿಯಾದರೆ ಖಂಡಿತ ನಾವು ಅದಕ್ಕೆ ಹಜ್ ಯಾತ್ರೆ ವೇಳೆ ಉತ್ತರ ನೀಡುತ್ತೇವೆ ಎಂದು ಅವರು ನೇರ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT