ಭೂ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಪ್ ಪಕ್ಷ ನಡೆಸಿದ ಪ್ರತಿಭಟನೆ ವೇಳೆ ಆತ್ಮಹತ್ಯೆ ಮಾಡಿಕೊಂಡ ರೈತ ಗಜೇಂದ್ರ ಸಿಂಗ್ 
ದೇಶ

ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಹುತಾತ್ಮ ಪಟ್ಟವೇಕೆ?

ಕಳೆದ ಏಪ್ರಿಲ್ ನಲ್ಲಿ ರಾಜಧಾನಿಯಲ್ಲಿ ನಡೆದ ಆಪ್ ರ್ಯಾಲಿಯ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ರಾಜಸ್ಥಾನದ ರೈತನಿಗೆ ಹುತಾತ್ಮ ಪಟ್ಟ ನೀಡಿದ ದೆಹಲಿ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ...

ನವದೆಹಲಿ: ಕಳೆದ ಏಪ್ರಿಲ್ ನಲ್ಲಿ ರಾಜಧಾನಿಯಲ್ಲಿ ನಡೆದ ಆಪ್ ರ್ಯಾಲಿಯ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ರಾಜಸ್ಥಾನದ ರೈತನಿಗೆ ಹುತಾತ್ಮ ಪಟ್ಟ ನೀಡಿದ ದೆಹಲಿ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ.

ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರೋಹಿಣಿ ಮತ್ತು ನ್ಯಾ.ಜಯಂತ್‍ನಾಥ್ ಈ ಬಗ್ಗೆ ಸರ್ಕಾರದಿಂದ ವಿವರಣೆ ಕೇಳಿದೆ. ``ಆತ್ಮಹತ್ಯೆ ಒಂದು ಅಪರಾಧ. ಅದನ್ನು ವೈಭವೀಕರಿಸುವುದು ಸರಿಯಲ್ಲ'' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಭೂಸ್ವಾಧೀನ ಮಸೂದೆ ಜಾರಿಯ ವಿರುದ್ಧ ಆಪ್ ನಡೆಸಿದ ರ್ಯಾಲಿಯಲ್ಲಿ ಏ.28ರಂದು ರಾಜಸ್ಥಾನದ ರೈತ ಗಜೇಂದ್ರಸಿಂಗ್ ಜಂತರ್‍ಮಂತರ್ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಬಗ್ಗೆ ಇನ್ನೂ ತನಿಖೆ ಜಾರಿಯಲ್ಲಿದೆ. ಆನಂತರ ಹುತಾತ್ಮ ಪಟ್ಟ ನೀಡಿದ ಆಪ್ ಸರ್ಕಾರದ ಕ್ರಮ ವಿರೋಧಿಸಿ ಮೇ ತಿಂಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT