ಭೂ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಪ್ ಪಕ್ಷ ನಡೆಸಿದ ಪ್ರತಿಭಟನೆ ವೇಳೆ ಆತ್ಮಹತ್ಯೆ ಮಾಡಿಕೊಂಡ ರೈತ ಗಜೇಂದ್ರ ಸಿಂಗ್ 
ದೇಶ

ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಹುತಾತ್ಮ ಪಟ್ಟವೇಕೆ?

ಕಳೆದ ಏಪ್ರಿಲ್ ನಲ್ಲಿ ರಾಜಧಾನಿಯಲ್ಲಿ ನಡೆದ ಆಪ್ ರ್ಯಾಲಿಯ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ರಾಜಸ್ಥಾನದ ರೈತನಿಗೆ ಹುತಾತ್ಮ ಪಟ್ಟ ನೀಡಿದ ದೆಹಲಿ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ...

ನವದೆಹಲಿ: ಕಳೆದ ಏಪ್ರಿಲ್ ನಲ್ಲಿ ರಾಜಧಾನಿಯಲ್ಲಿ ನಡೆದ ಆಪ್ ರ್ಯಾಲಿಯ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ರಾಜಸ್ಥಾನದ ರೈತನಿಗೆ ಹುತಾತ್ಮ ಪಟ್ಟ ನೀಡಿದ ದೆಹಲಿ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ.

ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರೋಹಿಣಿ ಮತ್ತು ನ್ಯಾ.ಜಯಂತ್‍ನಾಥ್ ಈ ಬಗ್ಗೆ ಸರ್ಕಾರದಿಂದ ವಿವರಣೆ ಕೇಳಿದೆ. ``ಆತ್ಮಹತ್ಯೆ ಒಂದು ಅಪರಾಧ. ಅದನ್ನು ವೈಭವೀಕರಿಸುವುದು ಸರಿಯಲ್ಲ'' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಭೂಸ್ವಾಧೀನ ಮಸೂದೆ ಜಾರಿಯ ವಿರುದ್ಧ ಆಪ್ ನಡೆಸಿದ ರ್ಯಾಲಿಯಲ್ಲಿ ಏ.28ರಂದು ರಾಜಸ್ಥಾನದ ರೈತ ಗಜೇಂದ್ರಸಿಂಗ್ ಜಂತರ್‍ಮಂತರ್ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಬಗ್ಗೆ ಇನ್ನೂ ತನಿಖೆ ಜಾರಿಯಲ್ಲಿದೆ. ಆನಂತರ ಹುತಾತ್ಮ ಪಟ್ಟ ನೀಡಿದ ಆಪ್ ಸರ್ಕಾರದ ಕ್ರಮ ವಿರೋಧಿಸಿ ಮೇ ತಿಂಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT