ಸಾಂದರ್ಭಿಕ ಚಿತ್ರ 
ದೇಶ

ಮದರಸಾದಲ್ಲಿ ಹಿಂದೂ, ಕ್ರಿಶ್ಚಿಯನ್ ಮಕ್ಕಳಿಗೆ ಶಿಕ್ಷಣ ನಿರಾಕರಣೆ: ಸಚಿವ ಏಕನಾಥ್ ಖಡ್ಸೆ

ಹಿಂದೂ ಅಥವಾ ಕ್ರಿಶ್ಟಿಯನ್ ಧರ್ಮಕ್ಕೆ ಸೇರಿದ ಮಕ್ಕಳು ಮದರಸಾಗಳಲ್ಲಿ ಕಲಿಯಲು ಬಯಸಿದರೆ ಅಂಥವರನ್ನು ಮದರಸಾಗಳಿಗೆ ಸೇರಿಸಿಕೊಳ್ಳಲ್ಲ. ..

ಮುಂಬಯಿ: ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ನೀಡದ ಮದರಸಾಗಳಿಗೆ ಶಾಲೆಯ ಮಾನ್ಯತೆ ಇಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

ಔಪಚಾರಿಕ ಶಿಕ್ಷಣದ ವಿಷಯಗಳಾದ ಇಂಗ್ಲಿಷ್, ಗಣಿತ, ವಿಜ್ಞಾನಗಳನ್ನು ಹೇಳಿಕೊಡದ ಮದರಸಾಗಳು ಶಾಲೆಗಳಲ್ಲ, ಅಂತಹ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಬಿಟ್ಟ ಮಕ್ಕಳೆಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಮದರಸಾಗಳಲ್ಲಿ ಧಾರ್ಮಿಕ ವಿಷಯಗಳ ಸಂಬಂಧ ಶಿಕ್ಷಣ ನೀಡಲಾಗುತ್ತದೆ. ಭಾರತದ ಪ್ರತಿ ಮಗುವಿಗೂ ಔಪಚಾರಿಕ ಶಿಕ್ಷಣ ಪಡೆಯುವ ಹಕ್ಕು ಇದೆ., ಆದರೆ ಮದರಸಾಗಳು ಈ ಕೆಲಸ ಮಾಡುತ್ತಿಲ್ಲ. ಹೀಗಾಗಿ ಮದರಸಾಗಳಲ್ಲಿ ಪಡೆಯುವ ಶಿಕ್ಷಣಕ್ಕೆ ಮಾನ್ಯತೆ ಇಲ್ಲ ಎಂದು ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಏಕನಾಥ್ ಖಡ್ಸೆ ತಿಳಿಸಿದ್ದಾರೆ.

ಹಿಂದೂ ಅಥವಾ ಕ್ರಿಶ್ಟಿಯನ್ ಧರ್ಮಕ್ಕೆ ಸೇರಿದ ಮಕ್ಕಳು ಮದರಸಾಗಳಲ್ಲಿ ಕಲಿಯಲು ಬಯಸಿದರೆ ಅಂಥವರನ್ನು ಮದರಸಾಗಳಿಗೆ ಸೇರಿಸಿಕೊಳ್ಳಲ್ಲ. ಅದು ಧರ್ಮದ ಬಗ್ಗೆ ಕಲಿಸಿಕೊಂಡುವ ಒಂದು ಮೂಲ. ಹೀಗಾಗಿ ಮದರಸಾ ಶಾಲೆಯಲ್ಲ. ಮದರಸಾಗಳಲ್ಲಿ ಇತರ ವಿಷಯಗಳ ಬಗ್ಗೆ ಶಿಕ್ಷಣ ನೀಡುವಂತೆ ಅವರನ್ನು ಕೇಳಿದೆವು. ಆದರೆ ಬೇರೆ ವಿಷಯಗಳ ಬಗ್ಗೆ ಶಿಕ್ಷಣ ಕಲಿಸಲು ಮದರಾಸಗಳು ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಮದರಸಾಗಳನ್ನು ಶಾಲೆಗಳೆಂದು ಪರಿಗಣಿಸಲಾಗುವುದಿಲ್ಲ ಎಂದು ಸಚಿವ ಏಕನಾಥ್ ಖಡ್ಸೆ ವಿವರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎಷ್ಟು ಮಕ್ಕಳು ಔಪಚಾರಿಕ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂಬುದರ ಬಗ್ಗೆ ಜುಲೈ 4 ರಿಂದ ಸಮೀಕ್ಷೆ ಆರಂಭಿಸಲು ಶಿಕ್ಷಣ ಇಲಾಖೆಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT