ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಗುಜರಾತ್ ಜನರ ಕ್ಷಮೆ ಕೋರಬೇಕು: ಕಾಂಗ್ರೆಸ್

ಗುಜರಾತ್‌ ಗಲಭೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ನವದೆಹಲಿ: ಗುಜರಾತ್‌ ಗಲಭೆ ಸಂಬಂಧ  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಮಾಜಿ ಪ್ರಧಾನಿ ಆಟಲ್‌ ಬಿಹಾರಿ ವಾಜಪೇಯಿ ಅವರು ಗುಜರಾತ್‌ ಗಲಭೆ ಬಗ್ಗೆ ಅಸಮಾಧಾನ ಹೊಂದಿದ್ದರಲ್ಲದೆ ಅದು ನಮ್ಮ ಕಡೆಯಿಂದ ಆಗಿರುವ ತಪ್ಪು ಎಂದಿದ್ದರು ಎಂದು ಮಾಜಿ ರಾ ಅಧ್ಯಕ್ಷರಾದ ದುಲತ್‌ ತಿಳಿಸಿದ್ದಾರೆ.

ಈ ವಿಷಯವನ್ನೇ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್‌ ನರೇಂದ್ರ ಮೋದಿ ಕ್ಷಮೆ ಕೋರಬೇಕು ಎಂದು ಪಟ್ಟು ಹಿಡಿದಿದೆ.

ಕಾಂಗ್ರೆಸ್‌ ವಕ್ತಾರ ಅಜಯ್‌ಕುಮಾರ್‌ ಮಾತನಾಡಿ ಬಿಜೆಪಿಯದು ಹುಸಿ ರಾಷ್ಟ್ರೀಯವಾದ ಎಂದು ಟೀಕಿಸಿದ್ದಾರೆ. ದುಲತ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಗುಜರಾತ್‌ ಗಲಭೆಗೆ ನರೇಂದ್ರ ಮೋದಿ ಅವರೇ ನೇರ  ಹೊಣೆ ಅವರು ಈ ಕೂಡಲೇ ದೇಶದ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ.

ಮೋದಿ ಅವರ ತಪ್ಪನ್ನು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಎತ್ತಿ ತೋರಿಸಿದ್ದಾರೆ. ಮೋದಿ  ಅವರಿಗೆ ರಾಜಧರ್ಮ ಪಾಲಿಸಲು ಬರುತ್ತಿಲ್ಲ  ಅವರಿಗೆ ನೈತಿಕತೆ ಇದ್ದರೆ ಪ್ರಧಾನಿ ಹುದ್ದೆಯನ್ನು ತ್ಯಜಿಸಲಿ ಎಂದು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ಉಪ ಚುನಾವಣೆ 2026: ಸಿದ್ದರಾಮಯ್ಯ ಸಂಧಾನ ಯಶಸ್ವಿ, ಬಾಗಲಕೋಟೆ ಕಾಂಗ್ರೆಸ್ ಕದನಕ್ಕೆ ಕೊನೆಗೂ ತೆರೆ!

'ನನ್ನ ಘನತೆಗೆ ಧಕ್ಕೆ, ಪ್ರಚಾರಕ್ಕೆ ಬರಲ್ಲ..' 'ನಿರ್ದೇಶಕ ಪ್ರೇಮ್ ಗೆ ಮೊದಲೇ ಎಚ್ಚರಿಕೆ ನೀಡಿದ್ದೆ..': ಬಾಲಿವುಡ್ ನಟಿ Nora Fatehi ಶಾಕಿಂಗ್ ಹೇಳಿಕೆ

'Rafale ಫೈಟರ್ ಜೆಟ್, ಕ್ಷಿಪಣಿಗಳೂ ಕೂಡ ನಿಷ್ಪ್ರಯೋಜಕ... ': ಲೆಫ್ಟಿನೆಂಟ್ ಜನರಲ್ Raj Shukla ಅಚ್ಚರಿ ಹೇಳಿಕೆ

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶಾಕ್; ಇನ್ನುಮುಂದೆ ಉತ್ತಮ ಕ್ರೆಡಿಟ್ ಸ್ಕೋರ್ ಕಡ್ಡಾಯ!

SCROLL FOR NEXT