ಅನಂತ್ ವಿಕ್ರಮ್ ಸಿಂಗ್ 
ದೇಶ

ಕಾನ್‌ಸ್ಟೆಬಲ್‌ ಹತ್ಯೆ: ಸಂಸದ ಸಂಜಯ್‌ ಸಿಂಗ್‌ ಪುತ್ರನ ಬಂಧನ

ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ನಡೆದಿದ್ದ ಕಾನ್‌ಸ್ಟೆಬಲ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್‌ ನಾಯಕ ಸಂಜಯ್‌ ಸಿಂಗ್‌ ಅವರ...

ಅಮೇಠಿ: ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ನಡೆದಿದ್ದ ಕಾನ್‌ಸ್ಟೆಬಲ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್‌ ನಾಯಕ ಸಂಜಯ್‌ ಸಿಂಗ್‌ ಅವರ ಪುತ್ರ ಅನಂತ್ ವಿಕ್ರಮ್‌ ಸಿಂಗ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಭೂಪತಿ ಭವನದ ಮಾಲೀಕತ್ವಕ್ಕೆ ಸಂಬಂಧಿಸಿದ ಆಸ್ತಿ ವಿವಾದದಲ್ಲಿ ಕಾನ್‌ಸ್ಟೆಬಲ್‌ ವಿಜಯ್‌ ಕುಮಾರ್‌ ಮಿಶ್ರಾ ಅವರನ್ನು ಅದೇ ಸ್ಥಳದಲ್ಲಿ ಹತ್ಯೆಗೈಯಲಾಗಿತ್ತು ಎಂದು ಪೊಲೀಸ್‌ ಸುಪರಿಂಟೆಂಡೆಂಟ್‌ ಹೀರಾ ಲಾಲ್‌ ತಿಳಿಸಿದ್ದಾರೆ.

ಅಮೇಠಿಯ ರಾಜ ಕುಟುಂಬದ ಹಲವರು ಭೂಪತಿ ಭವನದ ಮಾಲಕತ್ವ ತಮ್ಮದೆಂದು ಹೇಳಿಕೊಳ್ಳುತ್ತಿದ್ದು ಇದೇ ಭವನದಲ್ಲಿ ಅನಂತ್‌ ಅವರನ್ನು ಬಂಧಿಸಲಾಗಿದೆ. ಅನಂತ್ ವಿಕ್ರಮ್ ಸಿಂಗ್ ವಿರುದ್ಧ ಸ್ಥಳೀಯ ನ್ಯಾಯಾಲಯವು ಜಾಮೀನು ರಹಿತ ವಾರಂಟನ್ನು ಹೊರಡಿಸಿದೆ ಎಂದು ಎಸ್‌ ಪಿ ಹೀರಾ ಲಾಲ್‌ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT